ಬೆಂಗಳೂರು, ಜೂನ್ 26– ಕಾವೇರಿ ನೀರು ಹಂಚಿಕೆ ಕುರಿತು ನ್ಯಾಯ ಮಂಡಳಿ ಆದೇಶದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಕರ್ನಾಟಕದ ಪಾಲಿಗೆ ಕರಾಳವಾಗಿದ್ದು ರಾಜ್ಯ ಸರ್ಕಾರ ಇದನ್ನು ತಿರಸ್ಕರಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಇಂದಿಲ್ಲಿ ಆಗ್ರಹಪಡಿಸಿ ಕೇಂದ್ರದ ಕ್ರಮದ ವಿರುದ್ಧ ಉಗ್ರ ಚಳುವಳಿ ನಡೆಸುವ ಎಚ್ಚರಿಕೆ ನೀಡಿದರು.