<p><strong>‘ಧರ್ಮಕಾರಣ’ ಮತ್ತೆ ಮುಟ್ಟುಗೋಲು</strong></p>.<p>ಬೆಂಗಳೂರು ಜೂನ್ 27– ಹನ್ನೆರಡನೇ ಶತಮಾನದ ಶರಣರ ಕ್ರಾಂತಿ ಕಾಲದ ವಸ್ತು ಆಧರಿಸಿದ ಡಾ.ಪಿ.ವಿ.ನಾರಾಯಣ ಅವರ ಕಾದಂಬರಿ ‘ಧರ್ಮ ಕಾರಣ’ ಕೃತಿಯನ್ನು ಮತ್ತೆ ಮುಟ್ಟುಗೋಲು ಹಾಕಿಕೊಂಡು ಸರ್ಕಾರ ಮರು ಆದೇಶ ಹೊರಡಿಸಿದೆ.</p>.<p>ಈ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹೊರಡಿಸಿದ್ದ ಆದೇಶವನ್ನು ನಿನ್ನೆ ಬೆಳಿಗ್ಗೆ ಹಿಂತೆಗೆದುಕೊಂಡು ಆದೇಶ ಹೊರಡಿಸಿದ ಸರ್ಕಾರ, ಸಂಜೆ ಗೃಹ ಇಲಾಖೆಯ ಹೆಸರಿನಲ್ಲಿ ಮರು ಆದೇಶ ಹೊರಡಿಸಿ ಕಾದಂಬರಿಯನ್ನು ಮುಟ್ಟುಗೋಲು ಮಾಡಿಕೊಂಡಿದೆ.</p>.<p><strong>ಕಾವೇರಿ: ಕೇಂದ್ರ ಸೂಚನೆಗೆ ರಾಜ್ಯ ತಿರಸ್ಕಾರ</strong></p>.<p>ಬೆಂಗಳೂರು, ಜೂನ್ 27– ಕಾವೇರಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ಮಧ್ಯಂತರ ಆದೇಶದ ಜಾರಿಗೆ ಕೇಂದ್ರ ಸರ್ಕಾರ ಪ್ರಸ್ತಾವನೆ ‘ಅಗತ್ಯವಿಲ್ಲ’ ಎಂದು ರಾಜ್ಯ ಸರ್ಕಾರ ಅದನ್ನು ಇಂದು ಇಲ್ಲಿ ಸಾರಾಸಗಟಾಗಿ ತಿರಸ್ಕರಿಸಿದೆ.</p>.<p>ಅಧಿಸೂಚನೆಯ ಪ್ರಕಾರ ಕಾವೇರಿ ನದಿ ಪ್ರಾಧಿಕಾರ ರಚಿಸುವ ಅಗತ್ಯವಿಲ್ಲ ಎಂದು ಬಾರಿ ನೀರಾವರಿ ಸಚಿವ ಕೆ.ಎನ್.ನಾಗೇಗೌಡ ಅವರು ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಧರ್ಮಕಾರಣ’ ಮತ್ತೆ ಮುಟ್ಟುಗೋಲು</strong></p>.<p>ಬೆಂಗಳೂರು ಜೂನ್ 27– ಹನ್ನೆರಡನೇ ಶತಮಾನದ ಶರಣರ ಕ್ರಾಂತಿ ಕಾಲದ ವಸ್ತು ಆಧರಿಸಿದ ಡಾ.ಪಿ.ವಿ.ನಾರಾಯಣ ಅವರ ಕಾದಂಬರಿ ‘ಧರ್ಮ ಕಾರಣ’ ಕೃತಿಯನ್ನು ಮತ್ತೆ ಮುಟ್ಟುಗೋಲು ಹಾಕಿಕೊಂಡು ಸರ್ಕಾರ ಮರು ಆದೇಶ ಹೊರಡಿಸಿದೆ.</p>.<p>ಈ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹೊರಡಿಸಿದ್ದ ಆದೇಶವನ್ನು ನಿನ್ನೆ ಬೆಳಿಗ್ಗೆ ಹಿಂತೆಗೆದುಕೊಂಡು ಆದೇಶ ಹೊರಡಿಸಿದ ಸರ್ಕಾರ, ಸಂಜೆ ಗೃಹ ಇಲಾಖೆಯ ಹೆಸರಿನಲ್ಲಿ ಮರು ಆದೇಶ ಹೊರಡಿಸಿ ಕಾದಂಬರಿಯನ್ನು ಮುಟ್ಟುಗೋಲು ಮಾಡಿಕೊಂಡಿದೆ.</p>.<p><strong>ಕಾವೇರಿ: ಕೇಂದ್ರ ಸೂಚನೆಗೆ ರಾಜ್ಯ ತಿರಸ್ಕಾರ</strong></p>.<p>ಬೆಂಗಳೂರು, ಜೂನ್ 27– ಕಾವೇರಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ಮಧ್ಯಂತರ ಆದೇಶದ ಜಾರಿಗೆ ಕೇಂದ್ರ ಸರ್ಕಾರ ಪ್ರಸ್ತಾವನೆ ‘ಅಗತ್ಯವಿಲ್ಲ’ ಎಂದು ರಾಜ್ಯ ಸರ್ಕಾರ ಅದನ್ನು ಇಂದು ಇಲ್ಲಿ ಸಾರಾಸಗಟಾಗಿ ತಿರಸ್ಕರಿಸಿದೆ.</p>.<p>ಅಧಿಸೂಚನೆಯ ಪ್ರಕಾರ ಕಾವೇರಿ ನದಿ ಪ್ರಾಧಿಕಾರ ರಚಿಸುವ ಅಗತ್ಯವಿಲ್ಲ ಎಂದು ಬಾರಿ ನೀರಾವರಿ ಸಚಿವ ಕೆ.ಎನ್.ನಾಗೇಗೌಡ ಅವರು ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>