<p>ದಲಿತರ ಮೇಲಿನ ದೌರ್ಜನ್ಯ ತನಿಖೆಗೆ ವಿಶೇಷ ಕೋರ್ಟ್</p>.<p>ಬೆಂಗಳೂರು, ನ. 27– ದಲಿತರ ವಿರುದ್ಧ ನಡೆದ ದೌರ್ಜನ್ಯ ಕುರಿತ ಸುಮಾರು 2,000 ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ರಾಜ್ಯದಲ್ಲಿ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ಕಾರ ಹೈಕೋರ್ಟನ್ನು ಕೋರಲಿದೆ.</p>.<p>ಈ ವಿಚಾರವನ್ನು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಇಂದು ವರದಿಗಾರರಿಗೆ ತಿಳಿಸಿದರು.</p>.<p>ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿನ ದೌರ್ಜನ್ಯ ಸಮಿತಿ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ಸಭೆ ಸೇರಿ ಹೈಕೋರ್ಟಿಗೆ ಮನವಿ ಸಲ್ಲಿಸುವ ನಿರ್ಣಯ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.</p>.<p>ಮೋಸದಾಟ: ಅಜರ್ ವಿರುದ್ಧ ಆರೋಪ ಸಾಬೀತು</p>.<p>ನವದೆಹಲಿ, ನ. 27– ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಅವರು, ಕ್ರಿಕೆಟ್ ಮೋಸದಾಟದಲ್ಲಿ ಪಾಲ್ಗೊಂಡಿರುವುದು ಸಾಬೀತಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಸಿ. ಮುತ್ತಯ್ಯ ಹೇಳಿದ್ದಾರೆ.</p>.<p>ಕೆ. ಮಾಧವನ್ ಅವರ ವರದಿಯನ್ನು ಪರಿಶೀಲಿಸಿದ ನಂತರ ಮುತ್ತಯ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಲಿತರ ಮೇಲಿನ ದೌರ್ಜನ್ಯ ತನಿಖೆಗೆ ವಿಶೇಷ ಕೋರ್ಟ್</p>.<p>ಬೆಂಗಳೂರು, ನ. 27– ದಲಿತರ ವಿರುದ್ಧ ನಡೆದ ದೌರ್ಜನ್ಯ ಕುರಿತ ಸುಮಾರು 2,000 ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ರಾಜ್ಯದಲ್ಲಿ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ಕಾರ ಹೈಕೋರ್ಟನ್ನು ಕೋರಲಿದೆ.</p>.<p>ಈ ವಿಚಾರವನ್ನು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಇಂದು ವರದಿಗಾರರಿಗೆ ತಿಳಿಸಿದರು.</p>.<p>ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿನ ದೌರ್ಜನ್ಯ ಸಮಿತಿ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ಸಭೆ ಸೇರಿ ಹೈಕೋರ್ಟಿಗೆ ಮನವಿ ಸಲ್ಲಿಸುವ ನಿರ್ಣಯ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.</p>.<p>ಮೋಸದಾಟ: ಅಜರ್ ವಿರುದ್ಧ ಆರೋಪ ಸಾಬೀತು</p>.<p>ನವದೆಹಲಿ, ನ. 27– ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಅವರು, ಕ್ರಿಕೆಟ್ ಮೋಸದಾಟದಲ್ಲಿ ಪಾಲ್ಗೊಂಡಿರುವುದು ಸಾಬೀತಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಸಿ. ಮುತ್ತಯ್ಯ ಹೇಳಿದ್ದಾರೆ.</p>.<p>ಕೆ. ಮಾಧವನ್ ಅವರ ವರದಿಯನ್ನು ಪರಿಶೀಲಿಸಿದ ನಂತರ ಮುತ್ತಯ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>