<h2>ಪಂಚಾಯಿತಿ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ</h2>.<p>ನವದೆಹಲಿ, ಮಾರ್ಚ್ 31– ಕರ್ನಾಟಕ ಗ್ರಾಮ ಪಂಚಾಯಿತಿಗಳಿಗೆ ಆರು ವಾರಗಳೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿದ್ದ ಆಜ್ಞೆಗೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿತು.</p>.<p>ಸುಪ್ರೀಂ ಕೋರ್ಟ್ನ ಈ ಮಧ್ಯಂತರ ಆದೇಶದಿಂದ ನಾಳೆಯಿಂದ ನಡೆಯಬೇಕಾಗಿದ್ದ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಿದಂತಾಗಿದೆ. ನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಮತ್ತು ಆರ್.ಸಿ. ಲಹೋಟಿ ಅವರಿದ್ದ ನ್ಯಾಯಪೀಠವು ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಂಡು ಈ ಆದೇಶ ನೀಡಿತು.</p>.<h2>ಉಪ ಸಭಾಪತಿ ಅವಿರೋಧ ಆಯ್ಕೆ ಖಚಿತ</h2>.<p>ಬೆಂಗಳೂರು, ಮಾರ್ಚ್ 31– ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ವಿರೋಧ ಪಕ್ಷಗಳು ಜನತಾದಳದ ಅಭ್ಯರ್ಥಿಯನ್ನು ಬೆಂಬಲಿಸಿರುವುದರಿಂದ ಅಭ್ಯರ್ಥಿ ಡೇವಿಡ್ ಸಿಮೆಯೋನ್ ಅವರು ಈ ಸ್ಥಾನಕ್ಕೆ ಆಯ್ಕೆಯಾಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಪರಿಷತ್ತಿನ ವಿರೋಧ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿದ ಪರಿಣಾ ಮವಾಗಿ ಸರ್ವಸಮ್ಮತ ಅಭ್ಯರ್ಥಿ ಆಯ್ಕೆಗೆ ಅವರೆಲ್ಲರೂ ಒಲವು ತೋರಿರುವುದರಿಂದ ಸಿಮೆಯೋನ್ ಗೆಲುವಿಗೆ ಹಾದಿ ಸುಗಮವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಪಂಚಾಯಿತಿ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ</h2>.<p>ನವದೆಹಲಿ, ಮಾರ್ಚ್ 31– ಕರ್ನಾಟಕ ಗ್ರಾಮ ಪಂಚಾಯಿತಿಗಳಿಗೆ ಆರು ವಾರಗಳೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿದ್ದ ಆಜ್ಞೆಗೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿತು.</p>.<p>ಸುಪ್ರೀಂ ಕೋರ್ಟ್ನ ಈ ಮಧ್ಯಂತರ ಆದೇಶದಿಂದ ನಾಳೆಯಿಂದ ನಡೆಯಬೇಕಾಗಿದ್ದ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಿದಂತಾಗಿದೆ. ನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಮತ್ತು ಆರ್.ಸಿ. ಲಹೋಟಿ ಅವರಿದ್ದ ನ್ಯಾಯಪೀಠವು ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಂಡು ಈ ಆದೇಶ ನೀಡಿತು.</p>.<h2>ಉಪ ಸಭಾಪತಿ ಅವಿರೋಧ ಆಯ್ಕೆ ಖಚಿತ</h2>.<p>ಬೆಂಗಳೂರು, ಮಾರ್ಚ್ 31– ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ವಿರೋಧ ಪಕ್ಷಗಳು ಜನತಾದಳದ ಅಭ್ಯರ್ಥಿಯನ್ನು ಬೆಂಬಲಿಸಿರುವುದರಿಂದ ಅಭ್ಯರ್ಥಿ ಡೇವಿಡ್ ಸಿಮೆಯೋನ್ ಅವರು ಈ ಸ್ಥಾನಕ್ಕೆ ಆಯ್ಕೆಯಾಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಪರಿಷತ್ತಿನ ವಿರೋಧ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿದ ಪರಿಣಾ ಮವಾಗಿ ಸರ್ವಸಮ್ಮತ ಅಭ್ಯರ್ಥಿ ಆಯ್ಕೆಗೆ ಅವರೆಲ್ಲರೂ ಒಲವು ತೋರಿರುವುದರಿಂದ ಸಿಮೆಯೋನ್ ಗೆಲುವಿಗೆ ಹಾದಿ ಸುಗಮವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>