<p><strong>ಬೆಂಗಳೂರು</strong>, ನೈರುತ್ಯ ರೈಲ್ವೆ ವಲಯವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸುವುದಕ್ಕೆ ವಿರೋಧಿಸುವುದು ಸರಿಯಲ್ಲ, ಈ ವಲಯದ ಕೇಂದ್ರ ಕಚೇರಿಗಳನ್ನು ಹುಬ್ಬಳ್ಳಿ ಮತ್ತು ಬೆಂಗಳೂರು ನಗರಗಳೆರಡರಲ್ಲಿಯೂ ಸ್ಥಾಪಿಸಬೇಕು ಎಂದು ಒತ್ತಾಯಿಸಲು ತಾವು ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಯವರಲ್ಲಿಗೆ ಕರೆದೊಯ್ಯಲು ಸಿದ್ಧ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ವಿಧಾನಸಭೆಯಲ್ಲಿ ಇಂದು ಹೇಳಿದರು.</p><p>ಶೂನ್ಯವೇಳೆಯಲ್ಲಿ ಕನ್ನಡ ಚಳವಳಿಯ ವಾಟಾಳ್ ನಾಗರಾಜ್ ಅವರು ಪ್ರಸ್ತಾಪಿಸಿದ ನೈರುತ್ಯ ರೈಲ್ವೆ ವಲಯದ ಸ್ಥಳಾಂತರದ ಬಗ್ಗೆ ಸರ್ಕಾರದ ನಿಲುವನ್ನು ಅವರು ಸ್ಪಷ್ಟಪಡಿಸಿದರು.</p><p><strong>ಬಿಜೆಪಿ ನೇತೃತ್ವದ ಕೇಂದ್ರದ ಸರ್ಕಾರ ಸುಭದ್ರ: ವಾಜಪೇಯಿ</strong></p><p><strong>ನವದೆಹಲಿ,</strong> ಸಮ್ಮಿಶ್ರ ಸರ್ಕಾರ ನಡೆಸುವಂತಹ ಸುಲಭವಲ್ಲದ ಕೆಲಸವನ್ನು ತಾವು ಯಶಸ್ವಿಯಾಗಿ ನಿರ್ವಹಿಸುತ್ತಿರುವುದಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಸಮರ್ಥಿಸಿಕೊಂಡರು.</p><p>ಈ ಸರ್ಕಾರ ವರ್ಷ ತುಂಬುವುದರೊಳಗೆ ಬಿದ್ದುಹೋಗುವುದೆಂದು ಬಹಳ ಮಂದಿ ಕನಸು ಕಂಡರು. ಅವರಿಗೆಲ್ಲ ಈಗ ನಿರಾಶೆಯಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>, ನೈರುತ್ಯ ರೈಲ್ವೆ ವಲಯವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸುವುದಕ್ಕೆ ವಿರೋಧಿಸುವುದು ಸರಿಯಲ್ಲ, ಈ ವಲಯದ ಕೇಂದ್ರ ಕಚೇರಿಗಳನ್ನು ಹುಬ್ಬಳ್ಳಿ ಮತ್ತು ಬೆಂಗಳೂರು ನಗರಗಳೆರಡರಲ್ಲಿಯೂ ಸ್ಥಾಪಿಸಬೇಕು ಎಂದು ಒತ್ತಾಯಿಸಲು ತಾವು ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಯವರಲ್ಲಿಗೆ ಕರೆದೊಯ್ಯಲು ಸಿದ್ಧ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ವಿಧಾನಸಭೆಯಲ್ಲಿ ಇಂದು ಹೇಳಿದರು.</p><p>ಶೂನ್ಯವೇಳೆಯಲ್ಲಿ ಕನ್ನಡ ಚಳವಳಿಯ ವಾಟಾಳ್ ನಾಗರಾಜ್ ಅವರು ಪ್ರಸ್ತಾಪಿಸಿದ ನೈರುತ್ಯ ರೈಲ್ವೆ ವಲಯದ ಸ್ಥಳಾಂತರದ ಬಗ್ಗೆ ಸರ್ಕಾರದ ನಿಲುವನ್ನು ಅವರು ಸ್ಪಷ್ಟಪಡಿಸಿದರು.</p><p><strong>ಬಿಜೆಪಿ ನೇತೃತ್ವದ ಕೇಂದ್ರದ ಸರ್ಕಾರ ಸುಭದ್ರ: ವಾಜಪೇಯಿ</strong></p><p><strong>ನವದೆಹಲಿ,</strong> ಸಮ್ಮಿಶ್ರ ಸರ್ಕಾರ ನಡೆಸುವಂತಹ ಸುಲಭವಲ್ಲದ ಕೆಲಸವನ್ನು ತಾವು ಯಶಸ್ವಿಯಾಗಿ ನಿರ್ವಹಿಸುತ್ತಿರುವುದಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಸಮರ್ಥಿಸಿಕೊಂಡರು.</p><p>ಈ ಸರ್ಕಾರ ವರ್ಷ ತುಂಬುವುದರೊಳಗೆ ಬಿದ್ದುಹೋಗುವುದೆಂದು ಬಹಳ ಮಂದಿ ಕನಸು ಕಂಡರು. ಅವರಿಗೆಲ್ಲ ಈಗ ನಿರಾಶೆಯಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>