<p><strong>ದಾವಣಗೆರೆ, ಜೂನ್ 7:</strong> ಹರಿಹರ ತಾಲ್ಲೂಕು ದೇವರ ಬೆಳಕೆರೆ ಬಳಿ ಶ್ಯಾಗಲಹಳ್ಳ ಮತ್ತು ಸೂಳೆಕೆರೆ ಹಳ್ಳದ ಸಂಗಮದಲ್ಲಿ ಕಟ್ಟಿದ ಜಲಾಶಯಕ್ಕೆ ಇಂದು ಸಂಜೆ ಖಾಸಗಿ ಬಸ್ ಬಿದ್ದು ಸುಮಾರು 50 ಶಾಲಾ ಮಕ್ಕಳು ಸೇರಿ 100ಕ್ಕೂ ಹೆಚ್ಚು ಮಂದಿ ಜಲಸಮಾಧಿ ಆಗಿರಬಹುದು ಎಂದು ಶಂಕಿಸಲಾಗಿದೆ. </p><p>ಬಸ್ಸಿನಲ್ಲಿ ದಾವಣಗೆರೆ ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರು ಇದ್ದು, ಅವರೂ ನೀರುಪಾಲಾಗಿರುವ ಶಂಕೆ ಇದೆ. ಸತತ ಪ್ರಯತ್ನದಿಂದ ಮಧ್ಯರಾತ್ರಿವರೆಗೆ 40 ಶವಗಳನ್ನು ಮಾತ್ರ ಹೊರತೆಗೆಯಲು ಸಾಧ್ಯವಾಗಿದೆ. </p><p><strong>ದಾಳಿಗೆ ದಿಗಿಲು: ಪಾಕ್ ಸೈನಿಕ ಪರಾರಿ</strong></p><p><strong>ನವದೆಹಲಿ, ಜೂನ್ 7:</strong> ಭಾರತದ ಗಡಿ ಪ್ರವೇಶಿಸಲು ಪ್ರಯತ್ನ ನಡೆಸಿದ ಪಾಕಿಸ್ತಾನದ ಸೈನಿಕರು ಮತ್ತು ಮುಜಾಹಿದ್ದೀನ್ ಉಗ್ರಗಾಮಿಗಳನ್ನು ಭಾರತೀಯ ಸೈನಿಕರು ಯಶಸ್ವಿಯಾಗಿ ತಡೆದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಕಡೆ ಹೆಚ್ಚು ಸಾವು–ನೋವುಗಳು ಸಂಭವಿಸಿವೆ. </p><p>ಬಟಾಲಿಕ್ ವಲಯದಲ್ಲಿ ನಡೆದ ಈ ಪ್ರಯತ್ನವನ್ನು ತಡೆಯುವಾಗ ಪಾಕಿಸ್ತಾನದ ಸೈನಿಕರು ಗುಂಡು ಮತ್ತು ಫಿರಂಗಿ ದಾಳಿ ನಡೆಸಿದರೂ, ಭಾರತೀಯ ಸೇನೆಯ ಕಾರ್ಯಾಚರಣೆಯು ಅವರು, ಹಿಮ್ಮೆಟ್ಟುವಂತೆ ಮಾಡಿದ್ದಾಗಿ ಸೇನಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ, ಜೂನ್ 7:</strong> ಹರಿಹರ ತಾಲ್ಲೂಕು ದೇವರ ಬೆಳಕೆರೆ ಬಳಿ ಶ್ಯಾಗಲಹಳ್ಳ ಮತ್ತು ಸೂಳೆಕೆರೆ ಹಳ್ಳದ ಸಂಗಮದಲ್ಲಿ ಕಟ್ಟಿದ ಜಲಾಶಯಕ್ಕೆ ಇಂದು ಸಂಜೆ ಖಾಸಗಿ ಬಸ್ ಬಿದ್ದು ಸುಮಾರು 50 ಶಾಲಾ ಮಕ್ಕಳು ಸೇರಿ 100ಕ್ಕೂ ಹೆಚ್ಚು ಮಂದಿ ಜಲಸಮಾಧಿ ಆಗಿರಬಹುದು ಎಂದು ಶಂಕಿಸಲಾಗಿದೆ. </p><p>ಬಸ್ಸಿನಲ್ಲಿ ದಾವಣಗೆರೆ ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರು ಇದ್ದು, ಅವರೂ ನೀರುಪಾಲಾಗಿರುವ ಶಂಕೆ ಇದೆ. ಸತತ ಪ್ರಯತ್ನದಿಂದ ಮಧ್ಯರಾತ್ರಿವರೆಗೆ 40 ಶವಗಳನ್ನು ಮಾತ್ರ ಹೊರತೆಗೆಯಲು ಸಾಧ್ಯವಾಗಿದೆ. </p><p><strong>ದಾಳಿಗೆ ದಿಗಿಲು: ಪಾಕ್ ಸೈನಿಕ ಪರಾರಿ</strong></p><p><strong>ನವದೆಹಲಿ, ಜೂನ್ 7:</strong> ಭಾರತದ ಗಡಿ ಪ್ರವೇಶಿಸಲು ಪ್ರಯತ್ನ ನಡೆಸಿದ ಪಾಕಿಸ್ತಾನದ ಸೈನಿಕರು ಮತ್ತು ಮುಜಾಹಿದ್ದೀನ್ ಉಗ್ರಗಾಮಿಗಳನ್ನು ಭಾರತೀಯ ಸೈನಿಕರು ಯಶಸ್ವಿಯಾಗಿ ತಡೆದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಕಡೆ ಹೆಚ್ಚು ಸಾವು–ನೋವುಗಳು ಸಂಭವಿಸಿವೆ. </p><p>ಬಟಾಲಿಕ್ ವಲಯದಲ್ಲಿ ನಡೆದ ಈ ಪ್ರಯತ್ನವನ್ನು ತಡೆಯುವಾಗ ಪಾಕಿಸ್ತಾನದ ಸೈನಿಕರು ಗುಂಡು ಮತ್ತು ಫಿರಂಗಿ ದಾಳಿ ನಡೆಸಿದರೂ, ಭಾರತೀಯ ಸೇನೆಯ ಕಾರ್ಯಾಚರಣೆಯು ಅವರು, ಹಿಮ್ಮೆಟ್ಟುವಂತೆ ಮಾಡಿದ್ದಾಗಿ ಸೇನಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>