<p>‘ವಿವಿ ಕಾಯ್ದೆ ತಿದ್ದುಪಡಿ ತಂದರೆ ಅನುದಾನವಿಲ್ಲ’</p>.<p>ಮೈಸೂರು, ಜ. 7– ರಾಜ್ಯ ಸರ್ಕಾರವು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ವಿಶ್ವವಿದ್ಯಾಲಯಗಳ ಮೇಲೆ ಹತೋಟಿ ಸಾಧಿಸಲು ಪ್ರಯತ್ನಿಸಿದಲ್ಲಿ, ಅವುಗಳಿಗೆ ನೀಡುತ್ತಿ<br>ರುವ ಧನಸಹಾಯವನ್ನು ಹಿಂತೆಗೆದುಕೊಳ್ಳುವುದಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಡಾ. ಹರಿಗೌತಮ್ ಇಂದು ಇಲ್ಲಿ ಎಚ್ಚರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡು ತ್ತಿದ್ದ ಹರಿಗೌತಮ್ ಅವರು, ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತರುವ ನಿರ್ಣಯದ ಬಗ್ಗೆ ಮರುವಿಮರ್ಶೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>ಅವಧಿ ಮುಗಿದ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ</p>.<p>ಬೆಂಗಳೂರು, ಜ. 6– ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಗಳಿಗೆ ಜ. 28ರಂದು ನಡೆಯಬೇಕಾಗಿದ್ದ ಚುನಾವಣೆಗಳು ಹೈಕೋರ್ಟ್ ಆದೇಶದ ಪ್ರಕಾರ ಮುಂದಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವಧಿ ಮುಗಿದ ಈ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಅವರು ಇಂದು ಇಲ್ಲಿ ಹೇಳಿದರು.</p>.<p>ಚುನಾವಣಾ ದಿನಾಂಕವನ್ನು ಆರು ವಾರಗಳೊಳಗೆ ಸರ್ಕಾರ ಪ್ರಕಟಿಸುತ್ತದೆ ಎಂದು ಚಿಮ್ಮನಕಟ್ಟಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ವಿವಿ ಕಾಯ್ದೆ ತಿದ್ದುಪಡಿ ತಂದರೆ ಅನುದಾನವಿಲ್ಲ’</p>.<p>ಮೈಸೂರು, ಜ. 7– ರಾಜ್ಯ ಸರ್ಕಾರವು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ವಿಶ್ವವಿದ್ಯಾಲಯಗಳ ಮೇಲೆ ಹತೋಟಿ ಸಾಧಿಸಲು ಪ್ರಯತ್ನಿಸಿದಲ್ಲಿ, ಅವುಗಳಿಗೆ ನೀಡುತ್ತಿ<br>ರುವ ಧನಸಹಾಯವನ್ನು ಹಿಂತೆಗೆದುಕೊಳ್ಳುವುದಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಡಾ. ಹರಿಗೌತಮ್ ಇಂದು ಇಲ್ಲಿ ಎಚ್ಚರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡು ತ್ತಿದ್ದ ಹರಿಗೌತಮ್ ಅವರು, ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತರುವ ನಿರ್ಣಯದ ಬಗ್ಗೆ ಮರುವಿಮರ್ಶೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>ಅವಧಿ ಮುಗಿದ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ</p>.<p>ಬೆಂಗಳೂರು, ಜ. 6– ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಗಳಿಗೆ ಜ. 28ರಂದು ನಡೆಯಬೇಕಾಗಿದ್ದ ಚುನಾವಣೆಗಳು ಹೈಕೋರ್ಟ್ ಆದೇಶದ ಪ್ರಕಾರ ಮುಂದಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವಧಿ ಮುಗಿದ ಈ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಅವರು ಇಂದು ಇಲ್ಲಿ ಹೇಳಿದರು.</p>.<p>ಚುನಾವಣಾ ದಿನಾಂಕವನ್ನು ಆರು ವಾರಗಳೊಳಗೆ ಸರ್ಕಾರ ಪ್ರಕಟಿಸುತ್ತದೆ ಎಂದು ಚಿಮ್ಮನಕಟ್ಟಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>