<p>ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗಕ್ಕೆ ಪಟೇಲ್ ತರಾಟೆ</p><p>ಬೆಂಗಳೂರು, ಮಾರ್ಚ್ 22– ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ವೇಳಾಪಟ್ಟಿ ಪ್ರಕಟಿಸಿರುವ ರಾಜ್ಯ ಚುನಾವಣಾ ಆಯೋಗದ ಕ್ರಮವನ್ನು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ವಿಧಾನಸಭೆಯಲ್ಲಿ ಇಂದು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.</p><p>‘ಆರು ವಾರದೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತು. ಹಳೆಯ ಕಾನೂನು ಪ್ರಕಾರ ಚುನಾವಣೆ ನಡೆಸುವುದಾಗಿ ಆಯೋಗ ತಿಳಿಸಿದೆ. ಹೊಸ ಕಾನೂನು ಜಾರಿಯಲ್ಲಿರುವುದು ಆಯೋಗದ ಗಮನಕ್ಕೆ ಬಂದಿಲ್ಲವೇ?’ ಎಂದರು.</p><p><strong>ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಮಾನ್ಸಾಂಟೊ ಘಟಕ</strong></p><p>ಬೆಂಗಳೂರು, ಮಾರ್ಚ್ 22– ಕರ್ನಾಟಕದಲ್ಲಿ ವಿವಾದದ ಅಲೆ ಎಬ್ಬಿಸಿರುವ ಮಾನ್ಸಾಂಟೊ ಕಂಪನಿಯ ಅತ್ಯಾಧುನಿಕ ಸಂಶೋಧನಾ ಕೇಂದ್ರವೊಂದು ನಗರದ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಯಾವುದೇ ಸದ್ದುಗದ್ದಲವಿಲ್ಲದೆ ಅಸ್ತಿತ್ವಕ್ಕೆ ಬಂದಿದೆ.</p><p>ಬಹುರಾಷ್ಟ್ರೀಯ ಕಂಪನಿಯೊಂದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆವರಣದಲ್ಲಿ ಪ್ರಯೋಗಾಲಯ ನಿರ್ಮಾಣ ಮಾಡಲು ಇದೇ ಮೊದಲು ಅವಕಾಶ ನೀಡಿದ್ದು, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಮಾನ್ಸಾಂಟೊ ಈ ಪ್ರಯೋಗಾಲಯವನ್ನು ನಿರ್ಮಾಣ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗಕ್ಕೆ ಪಟೇಲ್ ತರಾಟೆ</p><p>ಬೆಂಗಳೂರು, ಮಾರ್ಚ್ 22– ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ವೇಳಾಪಟ್ಟಿ ಪ್ರಕಟಿಸಿರುವ ರಾಜ್ಯ ಚುನಾವಣಾ ಆಯೋಗದ ಕ್ರಮವನ್ನು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ವಿಧಾನಸಭೆಯಲ್ಲಿ ಇಂದು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.</p><p>‘ಆರು ವಾರದೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತು. ಹಳೆಯ ಕಾನೂನು ಪ್ರಕಾರ ಚುನಾವಣೆ ನಡೆಸುವುದಾಗಿ ಆಯೋಗ ತಿಳಿಸಿದೆ. ಹೊಸ ಕಾನೂನು ಜಾರಿಯಲ್ಲಿರುವುದು ಆಯೋಗದ ಗಮನಕ್ಕೆ ಬಂದಿಲ್ಲವೇ?’ ಎಂದರು.</p><p><strong>ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಮಾನ್ಸಾಂಟೊ ಘಟಕ</strong></p><p>ಬೆಂಗಳೂರು, ಮಾರ್ಚ್ 22– ಕರ್ನಾಟಕದಲ್ಲಿ ವಿವಾದದ ಅಲೆ ಎಬ್ಬಿಸಿರುವ ಮಾನ್ಸಾಂಟೊ ಕಂಪನಿಯ ಅತ್ಯಾಧುನಿಕ ಸಂಶೋಧನಾ ಕೇಂದ್ರವೊಂದು ನಗರದ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಯಾವುದೇ ಸದ್ದುಗದ್ದಲವಿಲ್ಲದೆ ಅಸ್ತಿತ್ವಕ್ಕೆ ಬಂದಿದೆ.</p><p>ಬಹುರಾಷ್ಟ್ರೀಯ ಕಂಪನಿಯೊಂದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆವರಣದಲ್ಲಿ ಪ್ರಯೋಗಾಲಯ ನಿರ್ಮಾಣ ಮಾಡಲು ಇದೇ ಮೊದಲು ಅವಕಾಶ ನೀಡಿದ್ದು, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಮಾನ್ಸಾಂಟೊ ಈ ಪ್ರಯೋಗಾಲಯವನ್ನು ನಿರ್ಮಾಣ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>