<p><strong>ಬೆಂಗಳೂರು, ಮೇ 25–</strong> ಒಂದರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸುಮಾರು 1.10 ಕೋಟಿ ವಿದ್ಯಾರ್ಥಿಗಳಿಗೆ ಕ್ಷೇಮ ವಿಮಾ ಯೋಜನೆಯನ್ನು ರಾಜ್ಯ ಸರ್ಕಾರ 2001–2002ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತಂದಿದೆ.</p><p>ರಾಜ್ಯ ಶಿಕ್ಷಕ ಕಲ್ಯಾಣ ನಿಧಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ರೋಟರಿ ಸಂಸ್ಥೆಯಿಂದ ದಿ ಓರಿಯಂಟಲ್ ಇನ್ಶ್ಯೂರೆನ್ಸ್ ಸಂಸ್ಥೆಯ ಮೂಲಕ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಇಲ್ಲಿ ತಿಳಿಸಿದರು.</p><p><strong>ಭಾರತ ಭೇಟಿ: ಮುಷರಫ್ಗೆ ಆಹ್ವಾನ ಪತ್ರ ಹಸ್ತಾಂತರ</strong></p><p><strong>ನವದೆಹಲಿ, ಮೇ 25 (ಪಿಟಿಐ)–</strong> ಸೇನಾಧಿಕಾರಿ ಜನರಲ್ ಪರ್ವಿಜ್ ಮುಷರಫ್ ಅವರಿಗೆ ವಾಜಪೇಯಿ ಅವರ ಮಾತುಕತೆ ಆಹ್ವಾನವನ್ನು ಭಾರತದ ಉಸ್ತುವಾರಿ ಹೈಕಮಿಷನರ್ ಸುಧೀರ್ ವ್ಯಾಸ್ ಅವರು, ಇಂದು ಪಾಕಿಸ್ತಾನದ ವಿದೇಶಾಂಗ ಕಚೇರಿಗೆ ಹಸ್ತಾಂತರಿಸಿದರು.</p><p>ಇಸ್ಲಾಮಾಬಾದಿನಲ್ಲಿ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಇನಾಮುಲ್ ಹಕ್ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿದ ವ್ಯಾಸ್, ಮುಷರಫ್ ಮತ್ತು ಬೇಗಂ ಮುಷರಫ್ ಅವರನ್ನು ಭಾರತಕ್ಕೆ ಆಹ್ವಾನಿಸುವ ಪತ್ರವನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಮೇ 25–</strong> ಒಂದರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸುಮಾರು 1.10 ಕೋಟಿ ವಿದ್ಯಾರ್ಥಿಗಳಿಗೆ ಕ್ಷೇಮ ವಿಮಾ ಯೋಜನೆಯನ್ನು ರಾಜ್ಯ ಸರ್ಕಾರ 2001–2002ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತಂದಿದೆ.</p><p>ರಾಜ್ಯ ಶಿಕ್ಷಕ ಕಲ್ಯಾಣ ನಿಧಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ರೋಟರಿ ಸಂಸ್ಥೆಯಿಂದ ದಿ ಓರಿಯಂಟಲ್ ಇನ್ಶ್ಯೂರೆನ್ಸ್ ಸಂಸ್ಥೆಯ ಮೂಲಕ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಇಲ್ಲಿ ತಿಳಿಸಿದರು.</p><p><strong>ಭಾರತ ಭೇಟಿ: ಮುಷರಫ್ಗೆ ಆಹ್ವಾನ ಪತ್ರ ಹಸ್ತಾಂತರ</strong></p><p><strong>ನವದೆಹಲಿ, ಮೇ 25 (ಪಿಟಿಐ)–</strong> ಸೇನಾಧಿಕಾರಿ ಜನರಲ್ ಪರ್ವಿಜ್ ಮುಷರಫ್ ಅವರಿಗೆ ವಾಜಪೇಯಿ ಅವರ ಮಾತುಕತೆ ಆಹ್ವಾನವನ್ನು ಭಾರತದ ಉಸ್ತುವಾರಿ ಹೈಕಮಿಷನರ್ ಸುಧೀರ್ ವ್ಯಾಸ್ ಅವರು, ಇಂದು ಪಾಕಿಸ್ತಾನದ ವಿದೇಶಾಂಗ ಕಚೇರಿಗೆ ಹಸ್ತಾಂತರಿಸಿದರು.</p><p>ಇಸ್ಲಾಮಾಬಾದಿನಲ್ಲಿ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಇನಾಮುಲ್ ಹಕ್ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿದ ವ್ಯಾಸ್, ಮುಷರಫ್ ಮತ್ತು ಬೇಗಂ ಮುಷರಫ್ ಅವರನ್ನು ಭಾರತಕ್ಕೆ ಆಹ್ವಾನಿಸುವ ಪತ್ರವನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>