<p>ನವದೆಹಲಿ, ಮೇ 3 (ಪಿಟಿಐ, ಯುಎನ್ಐ)– ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಯಿಂದ 155 ಟಿಎಂಸಿ ಅಡಿ ನೀರು ಸಂಗ್ರಹಿಸುವ ಕರ್ನಾಟಕದ ಪ್ರಸ್ತಾವವನ್ನು ಸುಪ್ರೀಂ ಕೋರ್ಟ್ ಇಂದು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವಹಿಸಿತು.</p><p>ಮುಖ್ಯ ನ್ಯಾಯಮೂರ್ತಿ ಎ.ಎಸ್. ಆನಂದ್ ಮತ್ತು ನ್ಯಾಯಮೂರ್ತಿಗಳಾದ ಬಿ.ಎನ್. ಕೃಪಾಲ್ ಹಾಗೂ ವಿ.ಎನ್. ಖಾರೆ ಅವರನ್ನೊಳಗೊಂಡಿರುವ ವಿಭಾಗೀಯ ಪೀಠ ಇಂದು ಈ ತೀರ್ಪನ್ನು ನೀಡಿ, ಆಲಮಟ್ಟಿ ಅಣೆಕಟ್ಟಿನಲ್ಲಿ ಇಂದು ಇರುವಂತೆ ಯಥಾಸ್ಥಿತಿಯನ್ನು ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿತು. ಸಂವಿಧಾನ ಪೀಠವು ಜುಲೈ 19ರಿಂದ ಕಾರ್ಯನಿರ್ವಹಿಸಲಿದೆ.</p><p><strong>ಹೆಗಡೆ ಪ್ರಮುಖ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ</strong></p><p>ನವದೆಹಲಿ, ಮೇ 3– ಲೋಕಶಕ್ತಿ ನಾಯಕ ರಾಮಕೃಷ್ಣ ಹೆಗಡೆ ಅವರ ಆಪ್ತ ಬೆಂಬಲಿಗ<br>ರಾಗಿದ್ದ ಆರ್.ವಿ. ದೇಶಪಾಂಡೆ, ಗುರುಪಾದಪ್ಪ ನಾಗಮಾರಪಲ್ಲಿ, ಬಿ.ಆರ್. ಯಾವಗಲ್, ಪಿ.ಸಿ. ಸಿದ್ದನಗೌಡರ, ಪಿ.ಕೋದಂಡರಾಮಯ್ಯ ಮತ್ತು ವಿ.ಎಸ್. ಉಗ್ರಪ್ಪ ಅವರು ಬಹಳ ದಿನಗಳ ನಿರೀಕ್ಷೆಯಂತೆ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರಿದರು.</p><p>ಜನತಾದಳ ಬಿಟ್ಟು ಹೆಗಡೆ ಅವರ ನವನಿರ್ಮಾಣ ವೇದಿಕೆ ಸೇರಿದ್ದ ಈ ಆರು ಮಂದಿಯು ಕಾಂಗ್ರೆಸ್ ಸೇರಿದ್ದರಿಂದ, ಕರ್ನಾಟಕದ ರಾಜಕೀಯ ಪರಿಸ್ಥಿತಿಯಲ್ಲಿ ಲೋಕಶಕ್ತಿಗೆ ಭಾರಿ ಹೊಡೆತ ಬಿದ್ದಂತಾಗಿದೆ.</p><p>ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಈ ಆರು ಮಂದಿ ಸೇರ್ಪಡೆಯನ್ನು ಪ್ರಕಟಿಸಿದರು.</p><p>‘ದೇಶಪಾಂಡೆ, ಗುರುಪಾದಪ್ಪ, ಯಾವಗಲ್ ಮತ್ತು ಸಿದ್ದನಗೌಡರ ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರಗಳನ್ನು ತಮಗೆ ಕಳುಹಿಸಿದ್ದು, ನಾಳೆ ವಿಧಾನಸಭೆ ಸ್ಪೀಕರ್ಗೆ ಅವುಗಳನ್ನು<br>ಸಲ್ಲಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ<br>ಎಸ್.ಎಂ.ಕೃಷ್ಣ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಮೇ 3 (ಪಿಟಿಐ, ಯುಎನ್ಐ)– ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಯಿಂದ 155 ಟಿಎಂಸಿ ಅಡಿ ನೀರು ಸಂಗ್ರಹಿಸುವ ಕರ್ನಾಟಕದ ಪ್ರಸ್ತಾವವನ್ನು ಸುಪ್ರೀಂ ಕೋರ್ಟ್ ಇಂದು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವಹಿಸಿತು.</p><p>ಮುಖ್ಯ ನ್ಯಾಯಮೂರ್ತಿ ಎ.ಎಸ್. ಆನಂದ್ ಮತ್ತು ನ್ಯಾಯಮೂರ್ತಿಗಳಾದ ಬಿ.ಎನ್. ಕೃಪಾಲ್ ಹಾಗೂ ವಿ.ಎನ್. ಖಾರೆ ಅವರನ್ನೊಳಗೊಂಡಿರುವ ವಿಭಾಗೀಯ ಪೀಠ ಇಂದು ಈ ತೀರ್ಪನ್ನು ನೀಡಿ, ಆಲಮಟ್ಟಿ ಅಣೆಕಟ್ಟಿನಲ್ಲಿ ಇಂದು ಇರುವಂತೆ ಯಥಾಸ್ಥಿತಿಯನ್ನು ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿತು. ಸಂವಿಧಾನ ಪೀಠವು ಜುಲೈ 19ರಿಂದ ಕಾರ್ಯನಿರ್ವಹಿಸಲಿದೆ.</p><p><strong>ಹೆಗಡೆ ಪ್ರಮುಖ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ</strong></p><p>ನವದೆಹಲಿ, ಮೇ 3– ಲೋಕಶಕ್ತಿ ನಾಯಕ ರಾಮಕೃಷ್ಣ ಹೆಗಡೆ ಅವರ ಆಪ್ತ ಬೆಂಬಲಿಗ<br>ರಾಗಿದ್ದ ಆರ್.ವಿ. ದೇಶಪಾಂಡೆ, ಗುರುಪಾದಪ್ಪ ನಾಗಮಾರಪಲ್ಲಿ, ಬಿ.ಆರ್. ಯಾವಗಲ್, ಪಿ.ಸಿ. ಸಿದ್ದನಗೌಡರ, ಪಿ.ಕೋದಂಡರಾಮಯ್ಯ ಮತ್ತು ವಿ.ಎಸ್. ಉಗ್ರಪ್ಪ ಅವರು ಬಹಳ ದಿನಗಳ ನಿರೀಕ್ಷೆಯಂತೆ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರಿದರು.</p><p>ಜನತಾದಳ ಬಿಟ್ಟು ಹೆಗಡೆ ಅವರ ನವನಿರ್ಮಾಣ ವೇದಿಕೆ ಸೇರಿದ್ದ ಈ ಆರು ಮಂದಿಯು ಕಾಂಗ್ರೆಸ್ ಸೇರಿದ್ದರಿಂದ, ಕರ್ನಾಟಕದ ರಾಜಕೀಯ ಪರಿಸ್ಥಿತಿಯಲ್ಲಿ ಲೋಕಶಕ್ತಿಗೆ ಭಾರಿ ಹೊಡೆತ ಬಿದ್ದಂತಾಗಿದೆ.</p><p>ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಈ ಆರು ಮಂದಿ ಸೇರ್ಪಡೆಯನ್ನು ಪ್ರಕಟಿಸಿದರು.</p><p>‘ದೇಶಪಾಂಡೆ, ಗುರುಪಾದಪ್ಪ, ಯಾವಗಲ್ ಮತ್ತು ಸಿದ್ದನಗೌಡರ ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರಗಳನ್ನು ತಮಗೆ ಕಳುಹಿಸಿದ್ದು, ನಾಳೆ ವಿಧಾನಸಭೆ ಸ್ಪೀಕರ್ಗೆ ಅವುಗಳನ್ನು<br>ಸಲ್ಲಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ<br>ಎಸ್.ಎಂ.ಕೃಷ್ಣ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>