<p><strong>ಪಾಕ್ ಸೈನಿಕರ ತೆರವಿಗೆ ಭಾರತ ಗಡುವು, ವಾಯುದಾಳಿ ಸ್ಥಗಿತ</strong></p><p>ನವದೆಹಲಿ, ಜುಲೈ 12– ಪಾಕಿಸ್ತಾನಿ ಸೇನೆಯು ಕಾರ್ಗಿಲ್ ವಲಯದಿಂದ ಕಾಲ್ತೆಗೆ<br>ಯುತ್ತಿರುವುದರಿಂದ ಭಾರತವು ತನ್ನ ವಾಯುಪಡೆಯ ದಾಳಿಯನ್ನು ಸ್ಥಗಿತಗೊಳಿಸಿದೆ. ಭೂ ಸೇನೆಯು ಸಹಾ ಪಾಕಿಸ್ತಾನಿ ಸೈನಿಕರು ವಾಪಸಾಗುತ್ತಿರುವ ಕಡೆಗಳಲ್ಲಿ ತನ್ನ ಕಾರ್ಯಾಚರಣೆಯನ್ನು 16ರ ಬೆಳಿಗ್ಗೆವರೆಗೆ ಸ್ಥಗಿತಗೊಳಿಸಿದೆ.</p><p>ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಯ ಮಹಾನಿರ್ದೇಶಕರ ನಡುವೆ ನಿನ್ನೆ ಮಧ್ಯಾಹ್ನ ಒಂದೂವರೆ ಗಂಟೆಯಲ್ಲಿ ಆಗಿರುವ ಒಪ್ಪಂದದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.</p><p><strong>ಕೇರಳ: ಸಾರ್ವಜನಿಕ ಧೂಮಪಾನ ನಿಷೇಧ</strong></p><p>ಕೊಚ್ಚಿ, ಜುಲೈ 12 (ಪಿಟಿಐ)– ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಿರುವ ಕೇರಳದ ಹೈಕೋರ್ಟ್, ತನ್ನ ಆದೇಶವನ್ನು ತಕ್ಷಣವೇ ಜಾರಿಗೆ ತರುವಂತೆ ಇಂದು ಜಿಲ್ಲಾ ಆಡಳಿತಗಳಿಗೆ ಆಜ್ಞೆ ಮಾಡಿತು.</p><p>ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಆರ್. ಲಕ್ಷ್ಮಣನ್ ಹಾಗೂ ನ್ಯಾಯಮೂರ್ತಿ ಕೆ. ನಾರಾಯಣ ಕುರುಪ್ ಅವರಿದ್ದ ವಿಭಾಗೀಯ ಪೀಠವು, ನ್ಯಾಯಾಲಯದ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ತಾಕೀತು ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಕ್ ಸೈನಿಕರ ತೆರವಿಗೆ ಭಾರತ ಗಡುವು, ವಾಯುದಾಳಿ ಸ್ಥಗಿತ</strong></p><p>ನವದೆಹಲಿ, ಜುಲೈ 12– ಪಾಕಿಸ್ತಾನಿ ಸೇನೆಯು ಕಾರ್ಗಿಲ್ ವಲಯದಿಂದ ಕಾಲ್ತೆಗೆ<br>ಯುತ್ತಿರುವುದರಿಂದ ಭಾರತವು ತನ್ನ ವಾಯುಪಡೆಯ ದಾಳಿಯನ್ನು ಸ್ಥಗಿತಗೊಳಿಸಿದೆ. ಭೂ ಸೇನೆಯು ಸಹಾ ಪಾಕಿಸ್ತಾನಿ ಸೈನಿಕರು ವಾಪಸಾಗುತ್ತಿರುವ ಕಡೆಗಳಲ್ಲಿ ತನ್ನ ಕಾರ್ಯಾಚರಣೆಯನ್ನು 16ರ ಬೆಳಿಗ್ಗೆವರೆಗೆ ಸ್ಥಗಿತಗೊಳಿಸಿದೆ.</p><p>ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಯ ಮಹಾನಿರ್ದೇಶಕರ ನಡುವೆ ನಿನ್ನೆ ಮಧ್ಯಾಹ್ನ ಒಂದೂವರೆ ಗಂಟೆಯಲ್ಲಿ ಆಗಿರುವ ಒಪ್ಪಂದದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.</p><p><strong>ಕೇರಳ: ಸಾರ್ವಜನಿಕ ಧೂಮಪಾನ ನಿಷೇಧ</strong></p><p>ಕೊಚ್ಚಿ, ಜುಲೈ 12 (ಪಿಟಿಐ)– ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಿರುವ ಕೇರಳದ ಹೈಕೋರ್ಟ್, ತನ್ನ ಆದೇಶವನ್ನು ತಕ್ಷಣವೇ ಜಾರಿಗೆ ತರುವಂತೆ ಇಂದು ಜಿಲ್ಲಾ ಆಡಳಿತಗಳಿಗೆ ಆಜ್ಞೆ ಮಾಡಿತು.</p><p>ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಆರ್. ಲಕ್ಷ್ಮಣನ್ ಹಾಗೂ ನ್ಯಾಯಮೂರ್ತಿ ಕೆ. ನಾರಾಯಣ ಕುರುಪ್ ಅವರಿದ್ದ ವಿಭಾಗೀಯ ಪೀಠವು, ನ್ಯಾಯಾಲಯದ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ತಾಕೀತು ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>