ನವದೆಹಲಿ, ಜ. 16–ಬಹಳ ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಹವಾಲ ಪ್ರಕರಣದಲ್ಲಿ ಆರೋಪಿಗಳಾದ ಮೂವರು ಕೇಂದ್ರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಕ್ರಮ ಜರುಗಿಸಲು ಸಿಬಿಐ ಇಂದು ರಾಷ್ಟ್ರಪತಿ ಅವರ ಅನುಮತಿ ಕೋರುವ ಮೂಲಕ ಈ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಮಾಜಿ ಉಪಪ್ರಧಾನಿ ದೇವಿ ಲಾಲ್, ಬಿಜೆಪಿ ಅಧ್ಯಕ್ಷ ಎಲ್.ಕೆ. ಅಡ್ವಾಣಿ, ಮಾಜಿ ಸಚಿವ ಅರ್ಜುನ್ ಸಿಂಗ್ ಸೇರಿದಂತೆ 7 ರಾಜಕಾರಣಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.