<p><strong>ಮೂವರು</strong><strong>ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿ ಅನುಮತಿ ಕೋರಿಕೆ</strong></p>.<p><strong>ನವದೆಹಲಿ, ಜ. 16–</strong>ಬಹಳ ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಹವಾಲ ಪ್ರಕರಣದಲ್ಲಿ ಆರೋಪಿಗಳಾದ ಮೂವರು ಕೇಂದ್ರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಕ್ರಮ ಜರುಗಿಸಲು ಸಿಬಿಐ ಇಂದು ರಾಷ್ಟ್ರಪತಿ ಅವರ ಅನುಮತಿ ಕೋರುವ ಮೂಲಕ ಈ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಮಾಜಿ ಉಪಪ್ರಧಾನಿ ದೇವಿ ಲಾಲ್, ಬಿಜೆಪಿ ಅಧ್ಯಕ್ಷ ಎಲ್.ಕೆ. ಅಡ್ವಾಣಿ, ಮಾಜಿ ಸಚಿವ ಅರ್ಜುನ್ ಸಿಂಗ್ ಸೇರಿದಂತೆ 7 ರಾಜಕಾರಣಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.</p>.<p>ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಎಸ್. ವರ್ಮಾ, ಎಸ್.ಪಿ. ಬರೂಚ ಮತ್ತು ಎಸ್.ಸಿ. ಸೇನ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಇಂದು ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ದೀಪಂಕರ್ ಪಿ. ಗುಪ್ತ ಅವರು ಹಾಜರಾಗಿ ಹವಾಲ ಪ್ರಕರಣದ ಬಗೆಗೆ ನಡೆಸಿರುವ ತನಿಖೆಯ ವಿವರವನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂವರು</strong><strong>ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿ ಅನುಮತಿ ಕೋರಿಕೆ</strong></p>.<p><strong>ನವದೆಹಲಿ, ಜ. 16–</strong>ಬಹಳ ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಹವಾಲ ಪ್ರಕರಣದಲ್ಲಿ ಆರೋಪಿಗಳಾದ ಮೂವರು ಕೇಂದ್ರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಕ್ರಮ ಜರುಗಿಸಲು ಸಿಬಿಐ ಇಂದು ರಾಷ್ಟ್ರಪತಿ ಅವರ ಅನುಮತಿ ಕೋರುವ ಮೂಲಕ ಈ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಮಾಜಿ ಉಪಪ್ರಧಾನಿ ದೇವಿ ಲಾಲ್, ಬಿಜೆಪಿ ಅಧ್ಯಕ್ಷ ಎಲ್.ಕೆ. ಅಡ್ವಾಣಿ, ಮಾಜಿ ಸಚಿವ ಅರ್ಜುನ್ ಸಿಂಗ್ ಸೇರಿದಂತೆ 7 ರಾಜಕಾರಣಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.</p>.<p>ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಎಸ್. ವರ್ಮಾ, ಎಸ್.ಪಿ. ಬರೂಚ ಮತ್ತು ಎಸ್.ಸಿ. ಸೇನ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಇಂದು ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ದೀಪಂಕರ್ ಪಿ. ಗುಪ್ತ ಅವರು ಹಾಜರಾಗಿ ಹವಾಲ ಪ್ರಕರಣದ ಬಗೆಗೆ ನಡೆಸಿರುವ ತನಿಖೆಯ ವಿವರವನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>