ಮಂಗಳೂರು, ಮಾರ್ಚ್ 26– ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ಸಭೆಯಲ್ಲಿ, ಇಲ್ಲಿಯ ಮಂಗಳೂರು ರಸಗೊಬ್ಬರ ಕಾರ್ಖಾನೆಯ ಮುಷ್ಕರನಿರತ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದು, ಆಡಳಿತ ಮಂಡಳಿಯು ಈ ಹಿಂದೆ ವಜಾ ಮಾಡಿದ್ದ ಆರು ಮಂದಿ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಒಪ್ಪಿಗೆ ನೀಡಿದೆ.