<p><strong>ಪಾಕಿಸ್ತಾನದ ಜತೆ ರಾಜಿ ಪ್ರಶ್ನೆಯೇ ಇಲ್ಲ: ಪ್ರಧಾನಿ</strong></p><p>ನವದೆಹಲಿ, ಜುಲೈ 7 (ಪಿಟಿಐ)– ಕಾರ್ಗಿಲ್ನಲ್ಲಿ ಅತಿಕ್ರಮಣಕಾರರ ವಿರುದ್ಧ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ವಿಷಯದಲ್ಲಿ ಪಾಕಿಸ್ತಾನದ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಇಲ್ಲಿ ಸ್ಪಷ್ಟಪಡಿಸಿದರು.</p><p>ವಾಸ್ತವ ನಿಯಂತ್ರಣ ರೇಖೆಯನ್ನು ಗೌರವಿಸಿ ಅತಿಕ್ರಮಣಕಾರರನ್ನು ವಾಪಸು ಪಡೆಯುವುದಾಗಿ ಪಾಕಿಸ್ತಾನ ನೀಡಿರುವ ವಾಗ್ದಾನದ ಫಲಿತಾಂಶವನ್ನು ಭಾರತ ಎದುರು ನೋಡುತ್ತಿದೆ. ಆದಾಗ್ಯೂ ಅತಿಕ್ರಮಣಕಾರರ ವಿರುದ್ಧದ ಕಾರ್ಯಾಚರಣೆ ಸ್ಥಗಿತಗೊಳಿಸು<br>ವುದಿಲ್ಲ ಎಂದು ಅವರು ಮುಖ್ಯಮಂತ್ರಿಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಾ ತಿಳಿಸಿದರು.</p><p><strong>ಪ್ರಾಥಮಿಕ ಶಾಲಾ ಶಿಕ್ಷಕರ ಮುಷ್ಕರ ಅಂತ್ಯ</strong></p><p>ಬೆಂಗಳೂರು, ಜುಲೈ 7– ವೇತನ ತಾರತಮ್ಯ ನಿವಾರಣೆ ಹಾಗೂ ಐದನೇ ವೇತನದ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಕಳೆದ 10 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಕಿಸ್ತಾನದ ಜತೆ ರಾಜಿ ಪ್ರಶ್ನೆಯೇ ಇಲ್ಲ: ಪ್ರಧಾನಿ</strong></p><p>ನವದೆಹಲಿ, ಜುಲೈ 7 (ಪಿಟಿಐ)– ಕಾರ್ಗಿಲ್ನಲ್ಲಿ ಅತಿಕ್ರಮಣಕಾರರ ವಿರುದ್ಧ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ವಿಷಯದಲ್ಲಿ ಪಾಕಿಸ್ತಾನದ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಇಲ್ಲಿ ಸ್ಪಷ್ಟಪಡಿಸಿದರು.</p><p>ವಾಸ್ತವ ನಿಯಂತ್ರಣ ರೇಖೆಯನ್ನು ಗೌರವಿಸಿ ಅತಿಕ್ರಮಣಕಾರರನ್ನು ವಾಪಸು ಪಡೆಯುವುದಾಗಿ ಪಾಕಿಸ್ತಾನ ನೀಡಿರುವ ವಾಗ್ದಾನದ ಫಲಿತಾಂಶವನ್ನು ಭಾರತ ಎದುರು ನೋಡುತ್ತಿದೆ. ಆದಾಗ್ಯೂ ಅತಿಕ್ರಮಣಕಾರರ ವಿರುದ್ಧದ ಕಾರ್ಯಾಚರಣೆ ಸ್ಥಗಿತಗೊಳಿಸು<br>ವುದಿಲ್ಲ ಎಂದು ಅವರು ಮುಖ್ಯಮಂತ್ರಿಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಾ ತಿಳಿಸಿದರು.</p><p><strong>ಪ್ರಾಥಮಿಕ ಶಾಲಾ ಶಿಕ್ಷಕರ ಮುಷ್ಕರ ಅಂತ್ಯ</strong></p><p>ಬೆಂಗಳೂರು, ಜುಲೈ 7– ವೇತನ ತಾರತಮ್ಯ ನಿವಾರಣೆ ಹಾಗೂ ಐದನೇ ವೇತನದ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಕಳೆದ 10 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>