<p><strong>ತೆಂಡೂಲ್ಕರ್ ಜೊತೆ ಸಿಬಿಐ ಚರ್ಚೆ</strong></p>.<p>ಮುಂಬೈ, ಸೆ. 7 (ಪಿಟಿಐ): ಕ್ರಿಕೆಟ್ ಮೋಸದಾಟಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಭಾರತ ತಂಡದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.</p>.<p>ಪಂದ್ಯಗಳು ನಡೆಯುವಾಗ ಡ್ರೆಸ್ಸಿಂಗ್ ರೂಮಿಗೆ ಯಾರಾದರೂ ಹೊರಗಿನ ವ್ಯಕ್ತಿಗಳು ಬರುತ್ತಿದ್ದರೇ ಎಂದು ಅವರು ಕೇಳಿದರು. ಆಟಗಾರರ ನಡುವಣ ಸಂಬಂಧ, ಡ್ರೆಸ್ಸಿಂಗ್ ರೂಮಿನ ವಾತಾವರಣ ಮತ್ತಿತರ ವಿಷಯಗಳ ಬಗ್ಗೆ ಅವರು ಪ್ರಶ್ನಿಸಿದರು ಎಂದು ಸಚಿನ್ ಹೇಳಿದ್ದಾರೆ.</p>.<p><strong>ಡಾ. ರಾಜ್ ಅಪಹರಣ: 40ನೇ ದಿನ...</strong></p>.<p>ಬೆಂಗಳೂರು, ಸೆ.7: ರಾಜ್ಕುಮಾರ್ ಮತ್ತು ಇತರ ಮೂವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಜೊತೆ ಚರ್ಚಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.</p>.<p>ಕಾಡುಗಳ್ಳ ವೀರಪ್ಪನ್ನಿಂದ ಡಾ. ರಾಜ್ಕುಮಾರ್ ಮತ್ತು ಇತರ ಮೂವರ ಸುರಕ್ಷಿತ ಬಿಡುಗಡೆಗೆ ತಮಿಳುನಾಡು ಮತ್ತು ಕರ್ನಾಟಕ ಸರ್ಕಾರ ಬೇಡಿಕೆ ಸಲ್ಲಿಸಿದರೆ ಅರೆ ಮಿಲಿಟರಿ ಪಡೆಗಳನ್ನು ಕಳಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಐ.ಡಿ. ಸ್ವಾಮಿ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಂಡೂಲ್ಕರ್ ಜೊತೆ ಸಿಬಿಐ ಚರ್ಚೆ</strong></p>.<p>ಮುಂಬೈ, ಸೆ. 7 (ಪಿಟಿಐ): ಕ್ರಿಕೆಟ್ ಮೋಸದಾಟಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಭಾರತ ತಂಡದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.</p>.<p>ಪಂದ್ಯಗಳು ನಡೆಯುವಾಗ ಡ್ರೆಸ್ಸಿಂಗ್ ರೂಮಿಗೆ ಯಾರಾದರೂ ಹೊರಗಿನ ವ್ಯಕ್ತಿಗಳು ಬರುತ್ತಿದ್ದರೇ ಎಂದು ಅವರು ಕೇಳಿದರು. ಆಟಗಾರರ ನಡುವಣ ಸಂಬಂಧ, ಡ್ರೆಸ್ಸಿಂಗ್ ರೂಮಿನ ವಾತಾವರಣ ಮತ್ತಿತರ ವಿಷಯಗಳ ಬಗ್ಗೆ ಅವರು ಪ್ರಶ್ನಿಸಿದರು ಎಂದು ಸಚಿನ್ ಹೇಳಿದ್ದಾರೆ.</p>.<p><strong>ಡಾ. ರಾಜ್ ಅಪಹರಣ: 40ನೇ ದಿನ...</strong></p>.<p>ಬೆಂಗಳೂರು, ಸೆ.7: ರಾಜ್ಕುಮಾರ್ ಮತ್ತು ಇತರ ಮೂವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಜೊತೆ ಚರ್ಚಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.</p>.<p>ಕಾಡುಗಳ್ಳ ವೀರಪ್ಪನ್ನಿಂದ ಡಾ. ರಾಜ್ಕುಮಾರ್ ಮತ್ತು ಇತರ ಮೂವರ ಸುರಕ್ಷಿತ ಬಿಡುಗಡೆಗೆ ತಮಿಳುನಾಡು ಮತ್ತು ಕರ್ನಾಟಕ ಸರ್ಕಾರ ಬೇಡಿಕೆ ಸಲ್ಲಿಸಿದರೆ ಅರೆ ಮಿಲಿಟರಿ ಪಡೆಗಳನ್ನು ಕಳಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಐ.ಡಿ. ಸ್ವಾಮಿ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>