ನವದೆಹಲಿ, ನವೆಂಬರ್ 26 (ಪಿಟಿಐ, ಯುಎನ್ಐ)– ರಕ್ಷಣಾ ಸಚಿವರ ಸಲಹೆಗಾರರಾಗಿರುವ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ದೇಶದ ಅತ್ಯುನ್ನತ ಗೌರವವಾದ ‘ಭಾರತ ರತ್ನ’ ಪ್ರಶಸ್ತಿ ನೀಡಲಾಗಿದೆ.
ಈ ಬಗ್ಗೆ ರಾಷ್ಟ್ರಪತಿ ಭವನ ಸಂಜೆ ಪ್ರಕಟಣೆಯೊಂದನ್ನು ನೀಡಿದೆ.
ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರು ಅಬ್ದುಲ್ ಕಲಾಂ ಅವರಿಗೆ ಪ್ರಶಸ್ತಿ ನೀಡಿದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ದಿವಂಗತಡಾ. ಹೋಮಿ ಜಹಾಂಗೀರ್ ಬಾಬಾ ಅವರ ನಂತರ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವ ಎರಡನೇ ವಿಜ್ಞಾನಿ ಇವರು.