<p><strong>ಚೆನ್ನೈ</strong>, ಮೇ 24 (ಪಿಟಿಐ)– ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರು ಬಿಜೆಪಿ ವಿರುದ್ಧ ಹಲವಾರು ಆರೋಪಗಳನ್ನು ಮಾಡುವ ಮೂಲಕ ವ್ಯವಸ್ಥಿತ ಗದಾಪ್ರಹಾರವನ್ನು ಆರಂಭಿಸಿದ್ದಾರೆ.</p><p>ಕೆಲವು ಬಿಜೆಪಿ ನಾಯಕರು ದೇಶದ್ರೋಹಿ ಶಕ್ತಿಗಳು ಮತ್ತು ವಿದೇಶಿ ಶಸ್ತ್ರಾಸ್ತ್ರ ವ್ಯಾಪಾರಿಗಳ ಜತೆ ಸಂಬಂಧವನ್ನು ಹೊಂದಿದ್ದಾರೆ ಎಂದು ಹೇಳಿರುವ ಅವರು, ಇಷ್ಟರಲ್ಲೇ ಇದರ ಬಗ್ಗೆ ವಿವರ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.</p><p>ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವ ಅವರು, ಭಾರತದ ಸಾರ್ವಭೌಮತ್ವದ ವಿರುದ್ಧ ಬಿಜೆಪಿಯಲ್ಲಿ ಹಿಂಸಾತ್ಮಕ ಗುಂಪೊಂದು ಕಾರ್ಯ ನಿರ್ವಹಿಸುತ್ತಿದೆ. ಆದರೆ ಜನರ ಮುಂದೆ ಸಾಧಾರಣ ನಾಯಕರನ್ನು ಮುಂದಿಟ್ಟು ಮುಗ್ಧತೆ ಮತ್ತು ಒಳ್ಳೆಯತನವನ್ನು ಪ್ರದರ್ಶಿಸಲಾಗುತ್ತಿದೆ ಎಂದು ಜಯಲಲಿತಾ ಆರೋಪಿಸಿದ್ದಾರೆ.</p><p><strong>ರಾಜೀವ್ ಹತ್ಯೆ: ಗಲ್ಲು ಶಿಕ್ಷೆ ಜಾರಿ ತಡೆಗೆ ನಕಾರ</strong></p><p>ನವದೆಹಲಿ, ಮೇ 24 (ಪಿಟಿಐ)– ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳು ತಮಗೆ ವಿಧಿಸಿರುವ ಗಲ್ಲು ಶಿಕ್ಷೆ ಆಜ್ಞೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಪುರಸ್ಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>, ಮೇ 24 (ಪಿಟಿಐ)– ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರು ಬಿಜೆಪಿ ವಿರುದ್ಧ ಹಲವಾರು ಆರೋಪಗಳನ್ನು ಮಾಡುವ ಮೂಲಕ ವ್ಯವಸ್ಥಿತ ಗದಾಪ್ರಹಾರವನ್ನು ಆರಂಭಿಸಿದ್ದಾರೆ.</p><p>ಕೆಲವು ಬಿಜೆಪಿ ನಾಯಕರು ದೇಶದ್ರೋಹಿ ಶಕ್ತಿಗಳು ಮತ್ತು ವಿದೇಶಿ ಶಸ್ತ್ರಾಸ್ತ್ರ ವ್ಯಾಪಾರಿಗಳ ಜತೆ ಸಂಬಂಧವನ್ನು ಹೊಂದಿದ್ದಾರೆ ಎಂದು ಹೇಳಿರುವ ಅವರು, ಇಷ್ಟರಲ್ಲೇ ಇದರ ಬಗ್ಗೆ ವಿವರ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.</p><p>ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವ ಅವರು, ಭಾರತದ ಸಾರ್ವಭೌಮತ್ವದ ವಿರುದ್ಧ ಬಿಜೆಪಿಯಲ್ಲಿ ಹಿಂಸಾತ್ಮಕ ಗುಂಪೊಂದು ಕಾರ್ಯ ನಿರ್ವಹಿಸುತ್ತಿದೆ. ಆದರೆ ಜನರ ಮುಂದೆ ಸಾಧಾರಣ ನಾಯಕರನ್ನು ಮುಂದಿಟ್ಟು ಮುಗ್ಧತೆ ಮತ್ತು ಒಳ್ಳೆಯತನವನ್ನು ಪ್ರದರ್ಶಿಸಲಾಗುತ್ತಿದೆ ಎಂದು ಜಯಲಲಿತಾ ಆರೋಪಿಸಿದ್ದಾರೆ.</p><p><strong>ರಾಜೀವ್ ಹತ್ಯೆ: ಗಲ್ಲು ಶಿಕ್ಷೆ ಜಾರಿ ತಡೆಗೆ ನಕಾರ</strong></p><p>ನವದೆಹಲಿ, ಮೇ 24 (ಪಿಟಿಐ)– ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳು ತಮಗೆ ವಿಧಿಸಿರುವ ಗಲ್ಲು ಶಿಕ್ಷೆ ಆಜ್ಞೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಪುರಸ್ಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>