ನವದೆಹಲಿ, ಫೆ. 6– ಆಲಮಟ್ಟಿ ಅಣೆಕಟ್ಟು ವಿವಾದ ಕುರಿತಂತೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಸಭೆಯೊಂದನ್ನು ಸದ್ಯದಲ್ಲಿಯೇ ಕರೆದು ಪರಸ್ಪರ ಮಾತುಕತೆ ಮೂಲಕ ಸಮಸ್ಯೆನ್ನು ಬಗೆಹರಿಸುವ ಪ್ರಯತ್ನ ಮಾಡಲು ಕೇಂದ್ರ ಜಲ ಸಂಪನ್ಮೂಲ ಸಚಿವ ಜನೇಶ್ವರ ಮಿಶ್ರ ಅವರು ನಿರ್ಧರಿಸಿರುವುದಾಗಿ ವಿಶ್ವಸನೀಯ ಮೂಲಗಳು ತಿಳಿಸಿವೆ.