ಬೆಂಗಳೂರು, ಆ. 17– ದೇಶದ ಎಲ್ಲ ನದಿಗಳಿಗೆ ಅಂತರ್ ಸಂಪರ್ಕ ಕಲ್ಪಿಸಿ, ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಅದರ ಬಳಕೆಯಾಗುವಂತೆ ಮಾಡಲು ಕೇಂದ್ರ ಯೋಜನೆ ಮತ್ತು ಕಾರ್ಯಕ್ರಮ ಜಾರಿ ಸಚಿವ ಡಾ. ವೈ.ಕೆ. ಅಲಘ್ ಅವರ ನೇತೃತ್ವದಲ್ಲಿ ತಜ್ಞ ಎಂಜಿನಿಯರ್ಗಳನ್ನು ಒಳಗೊಂಡ ಸಮಿತಿಯೊಂದನ್ನು ಕೇಂದ್ರ ಸರ್ಕಾರ ಶೀಘ್ರವೇ ರಚಿಸಲಿದೆ ಎಂದು ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಇಂದು ಇಲ್ಲಿ ಪ್ರಕಟಿಸಿದರು.