ಬೆಂಗಳೂರು, ನ. 21– ವಿಶ್ವಸುಂದರಿ ಸ್ಪರ್ಧೆಯನ್ನು ವಿರೋಧಿಸುತ್ತಿರುವ ಸಂಘ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲು ತಾವು ಸಿದ್ಧ ಎಂದು ಪ್ರಕಟಿಸಿದ ಎಬಿಸಿಎಲ್ ಸಂಸ್ಥೆಯ ಅಧ್ಯಕ್ಷ ಹಾಗೂ ಹಿಂದಿ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್, ಸ್ಪರ್ಧೆಯ ವಿರುದ್ಧ ನಡೆಸುತ್ತಿರುವ ಚಳವಳಿಯನ್ನು ಅಂತ್ಯಗೊಳಿಸುವಂತೆ ಪ್ರತಿಭಟನಕಾರರಲ್ಲಿ ಮನವಿ ಮಾಡಿದರು.