ನವದೆಹಲಿ, ಜುಲೈ 31 (ಪಿಟಿಐ, ಯುಎನ್ಐ)– ಮೇವು ಹಗರಣದ ಆರೋಪಿ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ಬಂಧಿಸಲು ಬಿಹಾರ ರಾಜ್ಯ ಸರ್ಕಾರ ಸಹಕರಿಸದಿರುವ ಬಗ್ಗೆ ಲೋಕಸಭೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದಾಗ ಕೋಲಾಹಲಕಾರಿ ವಾತಾವರಣ ನಿರ್ಮಾಣವಾಗಿ, ಸಮತಾ ಪಕ್ಷವು ಬಿಹಾರ್ ಆರ್ಜೆಡಿ ಸರ್ಕಾರ ವಜಾ ಮಾಡಬೇಕೆಂದು ಆಗ್ರಹಪಡಿಸಿತು.