<p><strong>ದಳದ ಪದ್ಮಾವತಿ ಬೆಂಗಳೂರು ಮೇಯರ್</strong></p>.<p>ಬೆಂಗಳೂರು, ನ. 25– ಬೆಂಗಳೂರು ಮಹಾ ನಗರಪಾಲಿಕೆಯ 47 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗಳಿಬ್ಬರು ಮೇಯರ್ ಮತ್ತು ಉಪ ಮೇಯರ್ ಆಗಿ ಆಯ್ಕೆಯಾಗಿದ್ದು ಈ ಎರಡೂ ಸ್ಥಾನಗಳಿಗೆ ಕ್ರಮವಾಗಿ ಜನತಾದಳದ ಪದ್ಮಾವತಿ ಗಂಗಾಧರಗೌಡ ಹಾಗೂ ವೆಂಟಕಲಕ್ಷ್ಮಿ ಚುನಾಯಿತರಾಗಿದ್ದಾರೆ.</p>.<p>ಈ ಹಿಂದೆ 1960ರಲ್ಲಿ ಬಿ. ಇಂದಿರಮ್ಮ ಅವರು ಮೇಯರ್ ಆಗಿದ್ದನ್ನು ಹೊರತು ಪಡಿಸಿದರೆ ಮತ್ತೊಬ್ಬ ಮಹಿಳೆ ಈ ಪ್ರತಿಷ್ಠಿತ ಸ್ಥಾನಕ್ಕೆ ಬಂದಿರಲಿಲ್ಲ.</p>.<p><strong>ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಜನೆ</strong></p>.<p>ಬೆಂಗಳೂರು, ನ. 25– ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಜತೆಗೆ ಬೆಂಗಳೂರು ಸಾರಿಗೆ ವ್ಯವಸ್ಥೆಯನ್ನು ಪ್ರತ್ಯೇಕಗೊಳಿಸಲು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಇಲ್ಲಿ ನಡೆದ ಉನ್ನತ ಮಟ್ಟದ ಸಭೆ ನಿರ್ಧಾರ ತೆಗೆದುಕೊಂಡಿದೆ.</p>.<p>’ಸಂಸ್ಥೆಯ ಆರ್ಥಿಕ ಸ್ಥಿತಿಗತಿ ಹಾಗೂ ಕಾರ್ಯ ನಿರ್ವಹಣೆಯ ಬಗೆಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ. ಸಂಸ್ಥೆ ನಡೆಯುತ್ತಿರುವ ಸ್ಥಿತಿ ನೋಡಿಯೂ ಹಾಗೇ ಬಿಟ್ಟರೆ ಮುಂದೆ ಕಷ್ಟವಾಗುತ್ತದೆ ಎಂಬುವುದು ಅನುಭವಕ್ಕೆ ಬಂದಿರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಯಿತು‘ ಎಂದು ಪಟೇಲ್ ಅವರು ಆ ನಂತರ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಳದ ಪದ್ಮಾವತಿ ಬೆಂಗಳೂರು ಮೇಯರ್</strong></p>.<p>ಬೆಂಗಳೂರು, ನ. 25– ಬೆಂಗಳೂರು ಮಹಾ ನಗರಪಾಲಿಕೆಯ 47 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗಳಿಬ್ಬರು ಮೇಯರ್ ಮತ್ತು ಉಪ ಮೇಯರ್ ಆಗಿ ಆಯ್ಕೆಯಾಗಿದ್ದು ಈ ಎರಡೂ ಸ್ಥಾನಗಳಿಗೆ ಕ್ರಮವಾಗಿ ಜನತಾದಳದ ಪದ್ಮಾವತಿ ಗಂಗಾಧರಗೌಡ ಹಾಗೂ ವೆಂಟಕಲಕ್ಷ್ಮಿ ಚುನಾಯಿತರಾಗಿದ್ದಾರೆ.</p>.<p>ಈ ಹಿಂದೆ 1960ರಲ್ಲಿ ಬಿ. ಇಂದಿರಮ್ಮ ಅವರು ಮೇಯರ್ ಆಗಿದ್ದನ್ನು ಹೊರತು ಪಡಿಸಿದರೆ ಮತ್ತೊಬ್ಬ ಮಹಿಳೆ ಈ ಪ್ರತಿಷ್ಠಿತ ಸ್ಥಾನಕ್ಕೆ ಬಂದಿರಲಿಲ್ಲ.</p>.<p><strong>ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಜನೆ</strong></p>.<p>ಬೆಂಗಳೂರು, ನ. 25– ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಜತೆಗೆ ಬೆಂಗಳೂರು ಸಾರಿಗೆ ವ್ಯವಸ್ಥೆಯನ್ನು ಪ್ರತ್ಯೇಕಗೊಳಿಸಲು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಇಲ್ಲಿ ನಡೆದ ಉನ್ನತ ಮಟ್ಟದ ಸಭೆ ನಿರ್ಧಾರ ತೆಗೆದುಕೊಂಡಿದೆ.</p>.<p>’ಸಂಸ್ಥೆಯ ಆರ್ಥಿಕ ಸ್ಥಿತಿಗತಿ ಹಾಗೂ ಕಾರ್ಯ ನಿರ್ವಹಣೆಯ ಬಗೆಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ. ಸಂಸ್ಥೆ ನಡೆಯುತ್ತಿರುವ ಸ್ಥಿತಿ ನೋಡಿಯೂ ಹಾಗೇ ಬಿಟ್ಟರೆ ಮುಂದೆ ಕಷ್ಟವಾಗುತ್ತದೆ ಎಂಬುವುದು ಅನುಭವಕ್ಕೆ ಬಂದಿರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಯಿತು‘ ಎಂದು ಪಟೇಲ್ ಅವರು ಆ ನಂತರ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>