ಬೆಂಗಳೂರು, ಫೆ. 19– ಈಚೆಗೆ
ಕೊಯಮತ್ತೂರಿನಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ತೀವ್ರ ಶೋಧ ನಡೆಸಿದ ತಮಿಳುನಾಡು ಪೊಲೀಸರು ಅಲ್ಲಿನ ತಿರುಮಲ ರಸ್ತೆಯಲ್ಲಿ ಎಲೆಕ್ಟ್ರಿಕ್ ಡಿಟೋನೇಟರ್, ಜಿಲೆಟಿನ್ ಕಡ್ಡಿಗಳು,
ಪೈಪ್ ಮತ್ತು ಪೆಟ್ರೋಲ್ ಬಾಂಬ್ಗಳನ್ನು ವಶಪಡಿಸಿಕೊಂಡಿದ್ದು, ಅವುಗಳಲ್ಲಿ ಕೆಲವೊಂದು ರಾಯಚೂರಿನಲ್ಲಿ ತಯಾರಾದವುಗಳೆಂದು ಅಲ್ಲಿನ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.