<p><strong>ಹಕ್ಕುಸ್ವಾಮ್ಯ: ತಿದ್ದುಪಡಿಗೆ ನಿರ್ಧಾರ</strong></p><p>ನವದೆಹಲಿ, ನ. 23– ಬಹುರಾಷ್ಟ್ರೀಯ ಕಂಪನಿಗಳಿಗೆ ಪ್ರತ್ಯೇಕ ಮಾರುಕಟ್ಟೆ ಹಕ್ಕಿಗೆ ಅವಕಾಶವಾಗುವಂತೆ ಭಾರತೀಯ ಹಕ್ಕು ಸ್ವಾಮ್ಯ (ಪೇಟೆಂಟ್) ಕಾಯ್ದೆಗೆ ತಿದ್ದುಪಡಿ ಸೂಚಿಸುವ ಮಹತ್ವದ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿತು.</p><p>ವಿಮಾ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶಕ್ಕೆ ಅನುಕೂಲವಾಗುವಂತೆ ವಿಮಾ ಕಾಯ್ದೆಗೆ ತಿದ್ದುಪಡಿ ಸೂಚಿಸುವ ಪ್ರಸ್ತಾವಕ್ಕೂ ಸಂಪುಟ ಅನುಮೋದನೆ ನೀಡಿತು.</p><p><strong>ಬಿರುಗಾಳಿ ಎಬ್ಬಿಸಿದ ಕೃಪಾಂಕ ವಿವಾದ</strong></p><p>ಬೆಂಗಳೂರು, ನ. 23– ಕೃಪಾಂಕದ ವಿವಾದ ಕರ್ನಾಟಕದಲ್ಲಿ, ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿ ಸಮುದಾಯದಲ್ಲಿ ದೊಡ್ಡ ಬಿರು ಗಾಳಿಯನ್ನೇ ಏಳಿಸಿದೆ. ಹಲವು ಪಟ್ಟಣಗಳಲ್ಲಿ ವಿದ್ಯಾರ್ಥಿಗಳು ಈ ಕೃಪಾಂಕ ರದ್ದು ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಶಾಲೆ ಕಾಲೇಜು ಗಳನ್ನು ಬಹಿಷ್ಕರಿಸಿದ್ದಾರೆ. ಇದು ದೊಡ್ಡದಾಗಿ ಬೆಳೆಯುವ ಸೂಚನೆ ಈಗಾಗಲೇ ಕಾಣಿಸಿದೆ.</p><p>ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಕೃಪಾಂಕ ನೀಡುವುದು ಉಚಿತ ಎಂದು ಭಾವಿಸಿ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಈ ಕ್ರಮವು ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಈಗ ರದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಕ್ಕುಸ್ವಾಮ್ಯ: ತಿದ್ದುಪಡಿಗೆ ನಿರ್ಧಾರ</strong></p><p>ನವದೆಹಲಿ, ನ. 23– ಬಹುರಾಷ್ಟ್ರೀಯ ಕಂಪನಿಗಳಿಗೆ ಪ್ರತ್ಯೇಕ ಮಾರುಕಟ್ಟೆ ಹಕ್ಕಿಗೆ ಅವಕಾಶವಾಗುವಂತೆ ಭಾರತೀಯ ಹಕ್ಕು ಸ್ವಾಮ್ಯ (ಪೇಟೆಂಟ್) ಕಾಯ್ದೆಗೆ ತಿದ್ದುಪಡಿ ಸೂಚಿಸುವ ಮಹತ್ವದ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿತು.</p><p>ವಿಮಾ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶಕ್ಕೆ ಅನುಕೂಲವಾಗುವಂತೆ ವಿಮಾ ಕಾಯ್ದೆಗೆ ತಿದ್ದುಪಡಿ ಸೂಚಿಸುವ ಪ್ರಸ್ತಾವಕ್ಕೂ ಸಂಪುಟ ಅನುಮೋದನೆ ನೀಡಿತು.</p><p><strong>ಬಿರುಗಾಳಿ ಎಬ್ಬಿಸಿದ ಕೃಪಾಂಕ ವಿವಾದ</strong></p><p>ಬೆಂಗಳೂರು, ನ. 23– ಕೃಪಾಂಕದ ವಿವಾದ ಕರ್ನಾಟಕದಲ್ಲಿ, ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿ ಸಮುದಾಯದಲ್ಲಿ ದೊಡ್ಡ ಬಿರು ಗಾಳಿಯನ್ನೇ ಏಳಿಸಿದೆ. ಹಲವು ಪಟ್ಟಣಗಳಲ್ಲಿ ವಿದ್ಯಾರ್ಥಿಗಳು ಈ ಕೃಪಾಂಕ ರದ್ದು ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಶಾಲೆ ಕಾಲೇಜು ಗಳನ್ನು ಬಹಿಷ್ಕರಿಸಿದ್ದಾರೆ. ಇದು ದೊಡ್ಡದಾಗಿ ಬೆಳೆಯುವ ಸೂಚನೆ ಈಗಾಗಲೇ ಕಾಣಿಸಿದೆ.</p><p>ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಕೃಪಾಂಕ ನೀಡುವುದು ಉಚಿತ ಎಂದು ಭಾವಿಸಿ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಈ ಕ್ರಮವು ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಈಗ ರದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>