<p><strong>ರಾಜ್ಯದಲ್ಲಿ ರಸ್ತೆ ಅಭಿವೃದ್ಧಿ ನಿಗಮ: ಸಂಪುಟ ಒಪ್ಪಿಗೆ</strong></p><p>ಬೆಂಗಳೂರು, ಮೇ 7– ರಾಜ್ಯದಲ್ಲಿರುವ ಜಿಲ್ಲಾ ಮುಖ್ಯ ರಸ್ತೆಗಳು ಮತ್ತು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮಹಾರಾಷ್ಟ್ರದ ಮಾದರಿಯಲ್ಲಿ ಹತ್ತು ಕೋಟಿ ರೂಪಾಯಿ ಮೂಲ ಬಂಡವಾಳದೊಂದಿಗೆ ‘ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ’ ಸ್ಥಾಪಿಸಲು ಇಂದು ಸೇರಿದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು. </p><p><strong>ಲಾಟರಿ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ</strong></p><p>ನವದೆಹಲಿ, ಮೇ 7 (ಯುಎನ್ಐ)– ರಾಜ್ಯಗಳು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಇತರ ರಾಜ್ಯಗಳ ಲಾಟರಿಗಳನ್ನು ನಿಷೇಧಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. </p><p>ಕೇಂದ್ರ ಜಾರಿಗೆ ತಂದಿರುವ ಲಾಟರಿ ನಿಷೇಧ ಕಾಯ್ದೆಯ 5ನೇ ಕಲಂ ಪ್ರಕಾರ ರಾಜ್ಯ ಸರ್ಕಾರಗಳಿಗೆ ಈ ಅಧಿಕಾರವಿದೆ ಎಂದು ತನ್ನ ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. </p><p><strong>‘ಕಾವೇರಿ ಗಲಭೆ ನಿರಾಶ್ರಿತರ ಪ್ರಾಧಿಕಾರ’ ರಚನೆಗೆ ಆದೇಶ</strong></p><p>ಕರೂರು, ಮೇ 7 (ಯುಎನ್ಐ)– ‘ಕಾವೇರಿ ಗಲಭೆ ನಿರಾಶ್ರಿತರ ಪ್ರಾಧಿಕಾರ’ವನ್ನು ಮೇ 15ರೊಳಗೆ ರಚಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. </p><p>ಪ್ರಾಧಿಕಾರವನ್ನು ರಚಿಸಿ 1991ರ ಡಿಸೆಂಬರ್ ಮತ್ತು 1992ರ ಜನವರಿ ತಿಂಗಳಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರಿನ ಹಂಚಿಕೆ ಸಂಬಂಧ ಉಂಟಾದ ಗಲಭೆಯಲ್ಲಿ<br>ತೊಂದರೆಗೊಳಗಾದವರಿಂದ ಅರ್ಜಿಯನ್ನು ಆಹ್ವಾನಿಸಬೇಕೆಂದು ಕೋರ್ಟ್ ಆದೇಶ ಕೊಟ್ಟಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯದಲ್ಲಿ ರಸ್ತೆ ಅಭಿವೃದ್ಧಿ ನಿಗಮ: ಸಂಪುಟ ಒಪ್ಪಿಗೆ</strong></p><p>ಬೆಂಗಳೂರು, ಮೇ 7– ರಾಜ್ಯದಲ್ಲಿರುವ ಜಿಲ್ಲಾ ಮುಖ್ಯ ರಸ್ತೆಗಳು ಮತ್ತು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮಹಾರಾಷ್ಟ್ರದ ಮಾದರಿಯಲ್ಲಿ ಹತ್ತು ಕೋಟಿ ರೂಪಾಯಿ ಮೂಲ ಬಂಡವಾಳದೊಂದಿಗೆ ‘ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ’ ಸ್ಥಾಪಿಸಲು ಇಂದು ಸೇರಿದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು. </p><p><strong>ಲಾಟರಿ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ</strong></p><p>ನವದೆಹಲಿ, ಮೇ 7 (ಯುಎನ್ಐ)– ರಾಜ್ಯಗಳು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಇತರ ರಾಜ್ಯಗಳ ಲಾಟರಿಗಳನ್ನು ನಿಷೇಧಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. </p><p>ಕೇಂದ್ರ ಜಾರಿಗೆ ತಂದಿರುವ ಲಾಟರಿ ನಿಷೇಧ ಕಾಯ್ದೆಯ 5ನೇ ಕಲಂ ಪ್ರಕಾರ ರಾಜ್ಯ ಸರ್ಕಾರಗಳಿಗೆ ಈ ಅಧಿಕಾರವಿದೆ ಎಂದು ತನ್ನ ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. </p><p><strong>‘ಕಾವೇರಿ ಗಲಭೆ ನಿರಾಶ್ರಿತರ ಪ್ರಾಧಿಕಾರ’ ರಚನೆಗೆ ಆದೇಶ</strong></p><p>ಕರೂರು, ಮೇ 7 (ಯುಎನ್ಐ)– ‘ಕಾವೇರಿ ಗಲಭೆ ನಿರಾಶ್ರಿತರ ಪ್ರಾಧಿಕಾರ’ವನ್ನು ಮೇ 15ರೊಳಗೆ ರಚಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. </p><p>ಪ್ರಾಧಿಕಾರವನ್ನು ರಚಿಸಿ 1991ರ ಡಿಸೆಂಬರ್ ಮತ್ತು 1992ರ ಜನವರಿ ತಿಂಗಳಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರಿನ ಹಂಚಿಕೆ ಸಂಬಂಧ ಉಂಟಾದ ಗಲಭೆಯಲ್ಲಿ<br>ತೊಂದರೆಗೊಳಗಾದವರಿಂದ ಅರ್ಜಿಯನ್ನು ಆಹ್ವಾನಿಸಬೇಕೆಂದು ಕೋರ್ಟ್ ಆದೇಶ ಕೊಟ್ಟಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>