<p><strong>ಶಾಸಕ ಸ್ಥಾನಕ್ಕೆ ದೇಶಪಾಂಡೆ ಮತ್ತಿತರರ ರಾಜೀನಾಮೆ</strong></p><p>ಬೆಂಗಳೂರು, ಮೇ 9– ಇತ್ತೀಚೆಗೆ ಜನತಾದಳ ತ್ಯಜಿಸಿ ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಗುರುಪಾದಪ್ಪ ನಾಗಮಾರಪಲ್ಲಿ, ಪಿ.ಸಿ.ಸಿದ್ದನಗೌಡರ್ ಹಾಗೂ ಬಿ.ಆರ್. ಯಾವಗಲ್ ಅವರು ವಿಧಾನಸಭಾ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದರು.</p><p>ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ರಾಜೀನಾಮೆ ಪತ್ರಗಳನ್ನು ಕಾಂಗ್ರೆಸ್ ಅಧ್ಯಕ್ಷ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಿಸಿದರು.</p><p>ಇಂದು ಭಾನುವಾರವಾದ್ದರಿಂದ ಅವರ ರಾಜೀನಾಮೆ ಪತ್ರಗಳನ್ನು ನಾಳೆ ವಿಧಾನಸಭೆಯ ಅಧ್ಯಕ್ಷರಿಗೆ ಕಳಿಸಿ ತಕ್ಷಣ ಅಂಗೀಕರಿಸುವಂತೆ ಕೇಳಿಕೊಳ್ಳಲಾಗುವುದು ಎಂದರು.</p><p><strong>ವಾಜಪೇಯಿ ಸರ್ಕಾರಕ್ಕೆ ಎಲ್ಲ ನಿರ್ಧಾರಗಳ ಹಕ್ಕಿದೆ: ಜಿವಿಜಿ</strong></p><p>ನವದೆಹಲಿ, ಮೇ 9 (ಯುಎನ್ಐ)– ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸೆರಿದಂತೆ ವಾಜಪೇಯಿ ಸರ್ಕಾರ ಎಲ್ಲಾ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಚುನಾವಣಾ ಆಯುಕ್ತ ಜಿವಿಜಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.</p><p>ಮಧ್ಯಂತರ ಚುನಾವಣೆ ನಡೆಯುವವರೆಗೆ ಸಿಟಿಬಿಟಿಯಂತಹ ಪ್ರಮುಖ ರಾಷ್ಟ್ರೀಯ ವಿಷಯಗಳ ಬಗ್ಗೆಯೂ ವಾಜಪೇಯಿ ನೇತೃತ್ವದ ಸರ್ಕಾರವು ನಿರ್ಧಾರ ತೆಗೆದುಕೊಳ್ಳ<br>ಬಹುದಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಾಸಕ ಸ್ಥಾನಕ್ಕೆ ದೇಶಪಾಂಡೆ ಮತ್ತಿತರರ ರಾಜೀನಾಮೆ</strong></p><p>ಬೆಂಗಳೂರು, ಮೇ 9– ಇತ್ತೀಚೆಗೆ ಜನತಾದಳ ತ್ಯಜಿಸಿ ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಗುರುಪಾದಪ್ಪ ನಾಗಮಾರಪಲ್ಲಿ, ಪಿ.ಸಿ.ಸಿದ್ದನಗೌಡರ್ ಹಾಗೂ ಬಿ.ಆರ್. ಯಾವಗಲ್ ಅವರು ವಿಧಾನಸಭಾ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದರು.</p><p>ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ರಾಜೀನಾಮೆ ಪತ್ರಗಳನ್ನು ಕಾಂಗ್ರೆಸ್ ಅಧ್ಯಕ್ಷ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಿಸಿದರು.</p><p>ಇಂದು ಭಾನುವಾರವಾದ್ದರಿಂದ ಅವರ ರಾಜೀನಾಮೆ ಪತ್ರಗಳನ್ನು ನಾಳೆ ವಿಧಾನಸಭೆಯ ಅಧ್ಯಕ್ಷರಿಗೆ ಕಳಿಸಿ ತಕ್ಷಣ ಅಂಗೀಕರಿಸುವಂತೆ ಕೇಳಿಕೊಳ್ಳಲಾಗುವುದು ಎಂದರು.</p><p><strong>ವಾಜಪೇಯಿ ಸರ್ಕಾರಕ್ಕೆ ಎಲ್ಲ ನಿರ್ಧಾರಗಳ ಹಕ್ಕಿದೆ: ಜಿವಿಜಿ</strong></p><p>ನವದೆಹಲಿ, ಮೇ 9 (ಯುಎನ್ಐ)– ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸೆರಿದಂತೆ ವಾಜಪೇಯಿ ಸರ್ಕಾರ ಎಲ್ಲಾ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಚುನಾವಣಾ ಆಯುಕ್ತ ಜಿವಿಜಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.</p><p>ಮಧ್ಯಂತರ ಚುನಾವಣೆ ನಡೆಯುವವರೆಗೆ ಸಿಟಿಬಿಟಿಯಂತಹ ಪ್ರಮುಖ ರಾಷ್ಟ್ರೀಯ ವಿಷಯಗಳ ಬಗ್ಗೆಯೂ ವಾಜಪೇಯಿ ನೇತೃತ್ವದ ಸರ್ಕಾರವು ನಿರ್ಧಾರ ತೆಗೆದುಕೊಳ್ಳ<br>ಬಹುದಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>