<p><strong>ಜಯಾ ರಾಜಕೀಯ ವಿಷಕನ್ಯೆ: ಮಹಾಜನ್</strong></p><p>ನವದೆಹಲಿ, ಮೇ 10 (ಪಿಟಿಐ)– ತಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಂಡವರನ್ನೇ ಕಚ್ಚುವ ಎಐಎಡಿಎಂಕೆ ನಾಯಕಿ ಜಯಲಲಿತಾ ‘ರಾಜಕೀಯ ವಿಷಕನ್ಯೆ’ ಎಂದು ಕೇಂದ್ರ ಸಚಿವ ಪ್ರಮೋದ್ ಮಹಾಜನ್ ಅವರು ಬಣ್ಣಿಸಿದ್ದಾರೆ.</p><p>‘ಜಯಲಲಿತಾ ರಾಜಕೀಯ ಹೊಂದಾಣಿಕೆ ಮಾಡಿಕೊಂಡವರಿಗೆಲ್ಲ ಬೆನ್ನ ಹಿಂದೆ ಚೂರಿ ಹಾಕಿದ್ದಾರೆ. ಅದು ಅವರ ಸ್ವಭಾವ’ ಎಂದು ಮಹಾಜನ್ ಖಾಸಗಿ ಟಿವಿ ಚಾನಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p><p>‘ವಿಷಕನ್ಯೆ ಎಂದು ತಿಳಿದೂ ಅವರೊಂದಿಗೆ ಏಕೆ ಹೊಂದಾಣಿಕೆ ಮಾಡಿಕೊಂಡಿರಿ?’ ಎಂದು ಕೇಳಿದ ಪ್ರಶ್ನೆಗೆ ‘ಆ ಸಂದರ್ಭದಲ್ಲಿ ಅದು ರಾಜಕೀಯವಾಗಿ ಅನಿವಾರ್ಯವಾಗಿತ್ತು’ ಎಂದರು.</p><p><strong>ಇಂಡಿಯನ್ ಏರ್ಲೈನ್ಸ್ ಖಾಸಗೀಕರಣಕ್ಕೆ ಕ್ರಮ</strong></p><p>ನವದೆಹಲಿ, ಮೇ 10 (ಯುಎನ್ಐ, ಪಿಟಿಐ)– ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್ಲೈನ್ಸ್ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಮಹತ್ವದ ನಿರ್ಣಯವನ್ನು ಹಣಕಾಸು ವ್ಯವಹಾರಗಳ ಸಂಸದೀಯ ಸಮಿತಿ ಇಂದು ತೆಗೆದುಕೊಂಡಿದೆ.</p><p>ಇಂಡಿಯನ್ ಏರ್ಲೈನ್ಸ್ ಸಂಸ್ಥೆಯ ಖಾಸಗೀಕರಣಕ್ಕೆ ಕೇಳ್ಕರ್ ಸಮಿತಿ ಶಿಫಾರಸು ಮಾಡಿತ್ತು. ಸಮಿತಿಯ ಸಭೆಯ ನಂತರ ಈ ವಿಷಯವನ್ನು ಪತ್ರಕರ್ತರಿಗೆ ತಿಳಿಸಿದ ಅಧಿಕೃತ ವಕ್ತಾರರು ‘ಈ ಹಿನ್ನೆಲೆಯಲ್ಲಿ ಸರ್ಕಾರವು 325 ಕೋಟಿ ರೂ.ಗಳ ಪಾಲು ಬಂಡವಾಳವನ್ನು ನೀಡಲು ಒಪ್ಪಿಗೆ ಸೂಚಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಾ ರಾಜಕೀಯ ವಿಷಕನ್ಯೆ: ಮಹಾಜನ್</strong></p><p>ನವದೆಹಲಿ, ಮೇ 10 (ಪಿಟಿಐ)– ತಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಂಡವರನ್ನೇ ಕಚ್ಚುವ ಎಐಎಡಿಎಂಕೆ ನಾಯಕಿ ಜಯಲಲಿತಾ ‘ರಾಜಕೀಯ ವಿಷಕನ್ಯೆ’ ಎಂದು ಕೇಂದ್ರ ಸಚಿವ ಪ್ರಮೋದ್ ಮಹಾಜನ್ ಅವರು ಬಣ್ಣಿಸಿದ್ದಾರೆ.</p><p>‘ಜಯಲಲಿತಾ ರಾಜಕೀಯ ಹೊಂದಾಣಿಕೆ ಮಾಡಿಕೊಂಡವರಿಗೆಲ್ಲ ಬೆನ್ನ ಹಿಂದೆ ಚೂರಿ ಹಾಕಿದ್ದಾರೆ. ಅದು ಅವರ ಸ್ವಭಾವ’ ಎಂದು ಮಹಾಜನ್ ಖಾಸಗಿ ಟಿವಿ ಚಾನಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p><p>‘ವಿಷಕನ್ಯೆ ಎಂದು ತಿಳಿದೂ ಅವರೊಂದಿಗೆ ಏಕೆ ಹೊಂದಾಣಿಕೆ ಮಾಡಿಕೊಂಡಿರಿ?’ ಎಂದು ಕೇಳಿದ ಪ್ರಶ್ನೆಗೆ ‘ಆ ಸಂದರ್ಭದಲ್ಲಿ ಅದು ರಾಜಕೀಯವಾಗಿ ಅನಿವಾರ್ಯವಾಗಿತ್ತು’ ಎಂದರು.</p><p><strong>ಇಂಡಿಯನ್ ಏರ್ಲೈನ್ಸ್ ಖಾಸಗೀಕರಣಕ್ಕೆ ಕ್ರಮ</strong></p><p>ನವದೆಹಲಿ, ಮೇ 10 (ಯುಎನ್ಐ, ಪಿಟಿಐ)– ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್ಲೈನ್ಸ್ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಮಹತ್ವದ ನಿರ್ಣಯವನ್ನು ಹಣಕಾಸು ವ್ಯವಹಾರಗಳ ಸಂಸದೀಯ ಸಮಿತಿ ಇಂದು ತೆಗೆದುಕೊಂಡಿದೆ.</p><p>ಇಂಡಿಯನ್ ಏರ್ಲೈನ್ಸ್ ಸಂಸ್ಥೆಯ ಖಾಸಗೀಕರಣಕ್ಕೆ ಕೇಳ್ಕರ್ ಸಮಿತಿ ಶಿಫಾರಸು ಮಾಡಿತ್ತು. ಸಮಿತಿಯ ಸಭೆಯ ನಂತರ ಈ ವಿಷಯವನ್ನು ಪತ್ರಕರ್ತರಿಗೆ ತಿಳಿಸಿದ ಅಧಿಕೃತ ವಕ್ತಾರರು ‘ಈ ಹಿನ್ನೆಲೆಯಲ್ಲಿ ಸರ್ಕಾರವು 325 ಕೋಟಿ ರೂ.ಗಳ ಪಾಲು ಬಂಡವಾಳವನ್ನು ನೀಡಲು ಒಪ್ಪಿಗೆ ಸೂಚಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>