<p>ನವದೆಹಲಿ, ಜುಲೈ 18– ಸುಮಾರು ರೂ. 800 ಕೋಟಿ ಅಂದಾಜು ವೆಚ್ಚದಲ್ಲಿ ಎಚ್ಎಂಟಿ ಕಾರ್ಖಾನೆಯ ಪುನರ್ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ನಷ್ಟದಲ್ಲಿರುವ ಎಚ್ಎಂಟಿಯ ಕಾಯಕಲ್ಪದ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ ರಚಿಸಿದ್ದ ಸಚಿವರ ತಂಡ ಇತ್ತೀಚೆಗೆ ನೀಡಿದ ಶಿಫಾರಸುಗಳನ್ನು ಇಂದು ಸಚಿವ ಸಂಪುಟ ಅಂಗೀಕರಿಸಿದೆ ಎಂದು ತಂಡದ ಸದಸ್ಯರಲ್ಲೊಬ್ಬರಾದ ಕೇಂದ್ರ ಸಂಸ್ಕೃತಿ ಸಚಿವ ಅನಂತಕುಮಾರ್ ಇಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಪೌರ ಕಾರ್ಮಿಕರ ಮುಷ್ಕರ ಅಂತ್ಯ</strong></p>.<p>ಬೆಂಗಳೂರು, ಜುಲೈ 18– ಕಳೆದ 18 ದಿನಗಳಿಂದ ರಾಜ್ಯದಾದ್ಯಂತ ಮುಷ್ಕರ ನಡೆಸುತ್ತಿರುವ ಪೌರ ಕಾರ್ಮಿಕರು ನಗರಾಭಿವೃದ್ಧಿ ಸಚಿವರ ಸಮ್ಮುಖದಲ್ಲಿ ಇಂದು ಆದ ಒಪ್ಪಂದಕ್ಕೆ ಅನುಸಾರವಾಗಿ ನಾಳೆಯಿಂದ ತಮ್ಮ ಮುಷ್ಕರವನ್ನು ವಾಪಸ್ ತೆಗೆದುಕೊಂಡು ಕೆಲಸಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.</p>.<p>ಇಂದು ಸಂಜೆ 4ಗಂಟೆಯಿಂದ ಸುಮಾರು ಮೂರು ಗಂಟೆ, ಸಚಿವರಾದ ಬಿ.ಬಿ. ಚಿಮ್ಮನಕಟ್ಟಿ ಮತ್ತು ಮಲ್ಲಿಕಾರ್ಜುನ ನಾಗಪ್ಪ ಅವರು ತಮ್ಮ ಅಧಿಕಾರಿಗಳೊಂದಿಗೆ ರಾಜ್ಯ ಪೌರಸೇವಾ ನೌಕರರ ಸಂಘದ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದರು.</p>.<p>ಅವರ 18 ಬೇಡಿಕೆಗಳ ಪೈಕಿ ಐದು ಬೇಡಿಕೆಗಳನ್ನು ಈಡೇರಿಸುವ ಕುರಿತು ಇಂದೇ ಆದೇಶವನ್ನು ಹೊರಡಿಸಲಾಗಿದ್ದು, ಅದಕ್ಕೆ ಅನುಸಾರವಾಗಿ ಮುಷ್ಕರವನ್ನು ಕೈಬಿಡಲು ನೌಕರರ ಪ್ರತಿನಿಧಿಗಳು ಒಪ್ಪಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಜುಲೈ 18– ಸುಮಾರು ರೂ. 800 ಕೋಟಿ ಅಂದಾಜು ವೆಚ್ಚದಲ್ಲಿ ಎಚ್ಎಂಟಿ ಕಾರ್ಖಾನೆಯ ಪುನರ್ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ನಷ್ಟದಲ್ಲಿರುವ ಎಚ್ಎಂಟಿಯ ಕಾಯಕಲ್ಪದ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ ರಚಿಸಿದ್ದ ಸಚಿವರ ತಂಡ ಇತ್ತೀಚೆಗೆ ನೀಡಿದ ಶಿಫಾರಸುಗಳನ್ನು ಇಂದು ಸಚಿವ ಸಂಪುಟ ಅಂಗೀಕರಿಸಿದೆ ಎಂದು ತಂಡದ ಸದಸ್ಯರಲ್ಲೊಬ್ಬರಾದ ಕೇಂದ್ರ ಸಂಸ್ಕೃತಿ ಸಚಿವ ಅನಂತಕುಮಾರ್ ಇಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಪೌರ ಕಾರ್ಮಿಕರ ಮುಷ್ಕರ ಅಂತ್ಯ</strong></p>.<p>ಬೆಂಗಳೂರು, ಜುಲೈ 18– ಕಳೆದ 18 ದಿನಗಳಿಂದ ರಾಜ್ಯದಾದ್ಯಂತ ಮುಷ್ಕರ ನಡೆಸುತ್ತಿರುವ ಪೌರ ಕಾರ್ಮಿಕರು ನಗರಾಭಿವೃದ್ಧಿ ಸಚಿವರ ಸಮ್ಮುಖದಲ್ಲಿ ಇಂದು ಆದ ಒಪ್ಪಂದಕ್ಕೆ ಅನುಸಾರವಾಗಿ ನಾಳೆಯಿಂದ ತಮ್ಮ ಮುಷ್ಕರವನ್ನು ವಾಪಸ್ ತೆಗೆದುಕೊಂಡು ಕೆಲಸಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.</p>.<p>ಇಂದು ಸಂಜೆ 4ಗಂಟೆಯಿಂದ ಸುಮಾರು ಮೂರು ಗಂಟೆ, ಸಚಿವರಾದ ಬಿ.ಬಿ. ಚಿಮ್ಮನಕಟ್ಟಿ ಮತ್ತು ಮಲ್ಲಿಕಾರ್ಜುನ ನಾಗಪ್ಪ ಅವರು ತಮ್ಮ ಅಧಿಕಾರಿಗಳೊಂದಿಗೆ ರಾಜ್ಯ ಪೌರಸೇವಾ ನೌಕರರ ಸಂಘದ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದರು.</p>.<p>ಅವರ 18 ಬೇಡಿಕೆಗಳ ಪೈಕಿ ಐದು ಬೇಡಿಕೆಗಳನ್ನು ಈಡೇರಿಸುವ ಕುರಿತು ಇಂದೇ ಆದೇಶವನ್ನು ಹೊರಡಿಸಲಾಗಿದ್ದು, ಅದಕ್ಕೆ ಅನುಸಾರವಾಗಿ ಮುಷ್ಕರವನ್ನು ಕೈಬಿಡಲು ನೌಕರರ ಪ್ರತಿನಿಧಿಗಳು ಒಪ್ಪಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>