<p>ಬೆಂಗಳೂರು, ಸೆಪ್ಟೆಂಬರ್ 22– ರಾಜ್ಯ ವಿದ್ಯುತ್ ಪ್ರಸರಣ ನಿಗಮಕ್ಕೆ ರೈತರು, ಸರ್ಕಾರಿ–ಅರೆ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿಯವರು ಉಳಿಸಿಕೊಂಡಿರುವ ವಿದ್ಯುತ್ ಬಾಕಿಯನ್ನು ನವೆಂಬರ್ 30ರೊಳಗೆ ಪಾವತಿ ಮಾಡಿದರೆ ಒಟ್ಟು 330 ಕೋಟಿ ರೂಪಾಯಿ ಬಡ್ಡಿ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ.</p>.<p>ನಿಗಮದ ಕಾರ್ಯವೈಖರಿಯನ್ನು ಪ್ರತಿ ವಾರ ಪರಿಶೀಲಿಸಲು ರಚನೆಯಾಗಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ಸಂಪುಟ ಉಪ ಸಮಿತಿಯ ಮೊದಲ ಸಭೆಯಲ್ಲಿ, ಇದೂ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದು ಕೊಳ್ಳಲಾಗಿದೆ.</p>.<p><strong>ಶತಾಬ್ದಿ: ಐಷಾರಾಮಿ ಸೌಲಭ್ಯ</strong></p>.<p>ಚೆನ್ನೈ, ಸೆಪ್ಟೆಂಬರ್ 22 (ಪಿಟಿಐ)– ಚೆನ್ನೈ–ಬೆಂಗಳೂರು–ಮೈಸೂರು ಮಧ್ಯೆ ಸಂಚರಿಸುವ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ‘ಎಕ್ಸಿಕ್ಯುಟೀವ್ ಚೇರ್ ಕಾರ್’ ಸೌಲಭ್ಯ ಅಳವಡಿಸಲಾಗುತ್ತಿದೆ. ಈ ಐಷಾರಾಮಿ ಸೌಲಭ್ಯವು ಅಕ್ಟೋಬರ್ 2ರಿಂದ ಜಾರಿಗೆ ಬರಲಿದೆ.</p>.<p>ಉದ್ಯಮಿಗಳಿಗಾಗಿ ಈ ಸೌಲಭ್ಯ ಅಳವಡಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಸೆಪ್ಟೆಂಬರ್ 22– ರಾಜ್ಯ ವಿದ್ಯುತ್ ಪ್ರಸರಣ ನಿಗಮಕ್ಕೆ ರೈತರು, ಸರ್ಕಾರಿ–ಅರೆ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿಯವರು ಉಳಿಸಿಕೊಂಡಿರುವ ವಿದ್ಯುತ್ ಬಾಕಿಯನ್ನು ನವೆಂಬರ್ 30ರೊಳಗೆ ಪಾವತಿ ಮಾಡಿದರೆ ಒಟ್ಟು 330 ಕೋಟಿ ರೂಪಾಯಿ ಬಡ್ಡಿ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ.</p>.<p>ನಿಗಮದ ಕಾರ್ಯವೈಖರಿಯನ್ನು ಪ್ರತಿ ವಾರ ಪರಿಶೀಲಿಸಲು ರಚನೆಯಾಗಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ಸಂಪುಟ ಉಪ ಸಮಿತಿಯ ಮೊದಲ ಸಭೆಯಲ್ಲಿ, ಇದೂ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದು ಕೊಳ್ಳಲಾಗಿದೆ.</p>.<p><strong>ಶತಾಬ್ದಿ: ಐಷಾರಾಮಿ ಸೌಲಭ್ಯ</strong></p>.<p>ಚೆನ್ನೈ, ಸೆಪ್ಟೆಂಬರ್ 22 (ಪಿಟಿಐ)– ಚೆನ್ನೈ–ಬೆಂಗಳೂರು–ಮೈಸೂರು ಮಧ್ಯೆ ಸಂಚರಿಸುವ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ‘ಎಕ್ಸಿಕ್ಯುಟೀವ್ ಚೇರ್ ಕಾರ್’ ಸೌಲಭ್ಯ ಅಳವಡಿಸಲಾಗುತ್ತಿದೆ. ಈ ಐಷಾರಾಮಿ ಸೌಲಭ್ಯವು ಅಕ್ಟೋಬರ್ 2ರಿಂದ ಜಾರಿಗೆ ಬರಲಿದೆ.</p>.<p>ಉದ್ಯಮಿಗಳಿಗಾಗಿ ಈ ಸೌಲಭ್ಯ ಅಳವಡಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>