ಬೆಂಗಳೂರು, ನ. 23– ವಿಶ್ವ ಸುಂದರಿ ಸ್ಪರ್ಧೆಯ ವಿರುದ್ಧ ಬಿಜೆಪಿ ಇಂದು ಕರೆ ನೀಡಿದ್ದ ಬೆಂಗಳೂರು ಬಂದ್ ವಿಫಲವಾಯಿತು. ಆದರೆ ಪ್ರತಿಭಟನಾಕಾರರಿಂದ ಕಲ್ಲುತೂರಾಟ, ಪೊಲೀಸರಿಂದ ಅಶ್ರುವಾಯು ಪ್ರಯೋಗ, ಲಾಠಿ ಪ್ರಹಾರ, ಎಂಪಿಗಳು, ಶಾಸಕರು ಸೇರಿ ಸಾವಿರಾರು ಜನರ ಬಂಧನದೊಂದಿಗೆ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸೆಯ ರೂಪ ಪಡೆಯಿತು.