ಬೆಂಗಳೂರು, ಜೂನ್ 17– ಜನತಾದಳ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸೇರಿದಂತೆ ಅವರ ಮಂತ್ರಿ ಮಂಡಲದ ಸದಸ್ಯರ ವಿದೇಶ ಪ್ರವಾಸಗಳು ಹೆಚ್ಚಾಗಿ ಇಲ್ಲಿಯವರೆಗೆ ರಾಜ್ಯ ಬೊಕ್ಕಸಕ್ಕೆ ಒಟ್ಟಾರೆ ಸುಮಾರು 12 ಕೋಟಿ ರೂಪಾಯಿಗಳಷ್ಟು ವೆಚ್ಚವಾಗಿರುವ ಹಿನ್ನೆಲೆಯಲ್ಲಿ ಪ್ರವಾಸದಿಂದ ರಾಜ್ಯಕ್ಕೆ ಆಗಿರುವ ಪ್ರಯೋಜನಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಇಲ್ಲಿ ಆಗ್ರಹಪಡಿಸಿದರು.