<p>ಶಕ್ತಿ ಪ್ರದರ್ಶಿಸಲು ಸಭೆ, ಸಮಾವೇಶಗಳ ರಾಜಕೀಯ</p><p>ಬೆಂಗಳೂರು, ಫೆ. 13– ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಏಳೆಂಟು ತಿಂಗಳುಗಳು ಇರುವಾಗಲೇ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಪೂರ್ವಸಿದ್ಧತೆಯ ಮೊದಲ ಹಂತವಾಗಿ ‘ರ್ಯಾಲಿ ರಾಜಕೀಯ’ ಮಾಡುತ್ತಾ ಪಕ್ಷ ಹಾಗೂ ಜನ ಸಂಘಟನೆಯಲ್ಲಿ ತೊಡಗಿವೆ.</p><p>ಜನತಾದಳವು ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪಕ್ಷದ ಅಧ್ಯಕ್ಷ ಪಟ್ಟ ಕಟ್ಟಿ ಚುನಾವಣಾ ಸೇನಾಧಿಪತಿಯನ್ನಾಗಿ ನೇಮಿಸಿದ್ದು, ಅವರ ಬೆನ್ನೆಲುಬಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಹಿರಿಯ ನಾಯಕ ಎಸ್.ಆರ್. ಬೊಮ್ಮಾಯಿ, ಸಿ.ಎಂ. ಇಬ್ರಾಹಿಂ, ಸಚಿವ ಡಿ. ಮಂಜುನಾಥ್ ಇದ್ದಾರೆ.</p><p>ಬಿಜೆಪಿಯು ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮುನ್ನಡೆದಿದ್ದು, ಅದರ ಬೆಂಬಲಕ್ಕೆ ಪ್ರಧಾನಿ ಎ.ಬಿ. ವಾಜಪೇಯಿ, ಗೃಹ ಸಚಿವ ಎಲ್.ಕೆ. ಅಡ್ವಾಣಿ, ರಾಜ್ಯದವರಾದ ಸಚಿವ ಅನಂತಕುಮಾರ್ ಹಾಗೂ ವೆಂಕಯ್ಯನಾಯ್ಡು ಇದ್ದಾರೆ.</p><p>ಲೋಕಶಕ್ತಿಗೆ ‘ಶಕ್ತಿ’ಯಾಗಿರುವ ಕೇಂದ್ರದ ವಾಣಿಜ್ಯ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಸಾರಥ್ಯದಲ್ಲಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಕ್ತಿ ಪ್ರದರ್ಶಿಸಲು ಸಭೆ, ಸಮಾವೇಶಗಳ ರಾಜಕೀಯ</p><p>ಬೆಂಗಳೂರು, ಫೆ. 13– ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಏಳೆಂಟು ತಿಂಗಳುಗಳು ಇರುವಾಗಲೇ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಪೂರ್ವಸಿದ್ಧತೆಯ ಮೊದಲ ಹಂತವಾಗಿ ‘ರ್ಯಾಲಿ ರಾಜಕೀಯ’ ಮಾಡುತ್ತಾ ಪಕ್ಷ ಹಾಗೂ ಜನ ಸಂಘಟನೆಯಲ್ಲಿ ತೊಡಗಿವೆ.</p><p>ಜನತಾದಳವು ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪಕ್ಷದ ಅಧ್ಯಕ್ಷ ಪಟ್ಟ ಕಟ್ಟಿ ಚುನಾವಣಾ ಸೇನಾಧಿಪತಿಯನ್ನಾಗಿ ನೇಮಿಸಿದ್ದು, ಅವರ ಬೆನ್ನೆಲುಬಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಹಿರಿಯ ನಾಯಕ ಎಸ್.ಆರ್. ಬೊಮ್ಮಾಯಿ, ಸಿ.ಎಂ. ಇಬ್ರಾಹಿಂ, ಸಚಿವ ಡಿ. ಮಂಜುನಾಥ್ ಇದ್ದಾರೆ.</p><p>ಬಿಜೆಪಿಯು ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮುನ್ನಡೆದಿದ್ದು, ಅದರ ಬೆಂಬಲಕ್ಕೆ ಪ್ರಧಾನಿ ಎ.ಬಿ. ವಾಜಪೇಯಿ, ಗೃಹ ಸಚಿವ ಎಲ್.ಕೆ. ಅಡ್ವಾಣಿ, ರಾಜ್ಯದವರಾದ ಸಚಿವ ಅನಂತಕುಮಾರ್ ಹಾಗೂ ವೆಂಕಯ್ಯನಾಯ್ಡು ಇದ್ದಾರೆ.</p><p>ಲೋಕಶಕ್ತಿಗೆ ‘ಶಕ್ತಿ’ಯಾಗಿರುವ ಕೇಂದ್ರದ ವಾಣಿಜ್ಯ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಸಾರಥ್ಯದಲ್ಲಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>