<p><strong>ನವದೆಹಲಿ</strong>, ಮೇ 20– ಸೋನಿಯಾ ಗಾಂಧಿ ವಿರುದ್ಧ ಬಂಡಾಯ ಎದ್ದಿರುವ ಮೂವರು ಹಿರಿಯ ನಾಯಕರಾದ ಶರದ್ ಪವಾರ್, ಪಿ.ಎ. ಸಂಗ್ಮಾ ಹಾಗೂ ತಾರಿಖ್ ಅನ್ವರ್ ಅವರನ್ನು ಇಂದು ರಾತ್ರಿ ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.</p><p>ಇಂದು ಸಂಜೆ 7.30ಕ್ಕೆ ಆರಂಭವಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿದೇಶಿ ಪ್ರಜೆ ಎಂಬ ಕಾರಣಕ್ಕೆ ಪ್ರಧಾನಿ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಮಾಡಬಾರದು ಎಂದು ಬಹಿರಂಗವಾಗಿ ಹೇಳುವ ಮೂಲಕ ಕಾಂಗ್ರೆಸ್ ಪಕ್ಷವೇ ಅಲ್ಲದೆ ದೇಶದಲ್ಲಿ ಕೋಲಾಹಲಕಾರಿ ಚರ್ಚೆಗೆ ಈ ಮೂವರು ನಾಯಕರು<br>ಕಾರಣರಾಗಿದ್ದರು.</p><p><strong>ಬಿಜೆಪಿ ಪ್ರಣಾಳಿಕೆಯಲ್ಲಿ ವಿದೇಶಿ ಪ್ರಜೆ ವಿವಾದ: ಪ್ರಧಾನಿ</strong></p><p>ನವದೆಹಲಿ, ಮೇ 20– ತನ್ನ ಮೊದಲ ನಿಲುವಿಗೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವು (ಎನ್ಡಿಎ) ವಿದೇಶಿ ಮೂಲದ ಭಾರತದ ನಾಗರಿಕರು ಪ್ರಧಾನಿ, ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಹುದ್ದೆಗಳನ್ನು<br>ಅಲಂಕರಿಸುವುದನ್ನು ನಿಷೇಧಿಸುವ ಸಲಹೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲು ಆಲೋಚಿಸುತ್ತಿದೆ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದಾರೆ.</p><p>ಈ ಮುನ್ನ ವಾಜಪೇಯಿ ಅವರು, ಆ ರೀತಿಯ ವಿಚಾರವನ್ನು ನಿರಾಕರಿಸಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತದ ನಾಗರಿಕರಾಗಿದ್ದು, ಚುನಾವಣೆಗೆ ಸ್ಪರ್ಧಿಸುವ ಹಾಗೂ ಪ್ರಧಾನಿಯಾಗುವ ಹಕ್ಕು ಆಕೆಗೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>, ಮೇ 20– ಸೋನಿಯಾ ಗಾಂಧಿ ವಿರುದ್ಧ ಬಂಡಾಯ ಎದ್ದಿರುವ ಮೂವರು ಹಿರಿಯ ನಾಯಕರಾದ ಶರದ್ ಪವಾರ್, ಪಿ.ಎ. ಸಂಗ್ಮಾ ಹಾಗೂ ತಾರಿಖ್ ಅನ್ವರ್ ಅವರನ್ನು ಇಂದು ರಾತ್ರಿ ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.</p><p>ಇಂದು ಸಂಜೆ 7.30ಕ್ಕೆ ಆರಂಭವಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿದೇಶಿ ಪ್ರಜೆ ಎಂಬ ಕಾರಣಕ್ಕೆ ಪ್ರಧಾನಿ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಮಾಡಬಾರದು ಎಂದು ಬಹಿರಂಗವಾಗಿ ಹೇಳುವ ಮೂಲಕ ಕಾಂಗ್ರೆಸ್ ಪಕ್ಷವೇ ಅಲ್ಲದೆ ದೇಶದಲ್ಲಿ ಕೋಲಾಹಲಕಾರಿ ಚರ್ಚೆಗೆ ಈ ಮೂವರು ನಾಯಕರು<br>ಕಾರಣರಾಗಿದ್ದರು.</p><p><strong>ಬಿಜೆಪಿ ಪ್ರಣಾಳಿಕೆಯಲ್ಲಿ ವಿದೇಶಿ ಪ್ರಜೆ ವಿವಾದ: ಪ್ರಧಾನಿ</strong></p><p>ನವದೆಹಲಿ, ಮೇ 20– ತನ್ನ ಮೊದಲ ನಿಲುವಿಗೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವು (ಎನ್ಡಿಎ) ವಿದೇಶಿ ಮೂಲದ ಭಾರತದ ನಾಗರಿಕರು ಪ್ರಧಾನಿ, ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಹುದ್ದೆಗಳನ್ನು<br>ಅಲಂಕರಿಸುವುದನ್ನು ನಿಷೇಧಿಸುವ ಸಲಹೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲು ಆಲೋಚಿಸುತ್ತಿದೆ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದಾರೆ.</p><p>ಈ ಮುನ್ನ ವಾಜಪೇಯಿ ಅವರು, ಆ ರೀತಿಯ ವಿಚಾರವನ್ನು ನಿರಾಕರಿಸಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತದ ನಾಗರಿಕರಾಗಿದ್ದು, ಚುನಾವಣೆಗೆ ಸ್ಪರ್ಧಿಸುವ ಹಾಗೂ ಪ್ರಧಾನಿಯಾಗುವ ಹಕ್ಕು ಆಕೆಗೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>