<p>ನವದೆಹಲಿ, ಏ. 23– ರಾಷ್ಟ್ರದಲ್ಲಿ, ವಿಶೇಷವಾಗಿ ಗುಜರಾತ್ ಮತ್ತು ರಾಜಸ್ಥಾನ ದಲ್ಲಿ ಭೀಕರ ಬರಗಾಲಕ್ಕೆ ತುತ್ತಾಗಿರುವ ಜನರ ನೆರವಿಗೆ ಧಾವಿಸುವಂತೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ರಾಷ್ಟ್ರದ ಜನತೆಗೆ ಕಳಕಳಿಯಿಂದ ಮನವಿ ಮಾಡಿಕೊಂಡಿದ್ದಾರೆ.</p><p>ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ‘ನಿಸರ್ಗ ವಿಕೋಪ ನಿಧಿ ಮತ್ತು ಇತರ ಯೋಜನೆಗಳಿಂದ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡುತ್ತಿದೆ. ಆದರೆ ಬರಗಾಲಕ್ಕೆ ತುತ್ತಾಗಿರುವ ಜನ ಮತ್ತು ಜಾನುವಾರುಗಳ ಸಂಖ್ಯೆಯನ್ನು ಗಮನಿಸಿದರೆ ಸರ್ಕಾರದ ಈ ಹಣ ಸಾಲುವುದಿಲ್ಲ. ಆಹಾರ, ಮೇವು, ಇತರ ಸೌಲಭ್ಯಗಳಿಗೆ ಅಪಾರ ಪ್ರಮಾಣದಲ್ಲಿ ಹಣ ಬೇಕಾಗುತ್ತದೆ ಎಂದು ತಿಳಿಸಿದರು.</p><p>‘ನೀವೆಲ್ಲ ಕೈಗೂಡಿಸಿದರೆ ಮಾತ್ರ ಸಂಕಷ್ಟದಲ್ಲಿರುವ ಜನರನ್ನು ಸಂರಕ್ಷಿಸಬಹುದು’ ಎಂದು ವಾಜಪೇಯಿ ಅವರು ತಿಳಿಸಿದರು.</p><p>ವರ್ಷದ ಬಳಿಕ ಮರಳಿದ 19 ಮೀನುಗಾರರು</p><p>ಚನ್ನೈ, ಏ. 23 (ಪಿಟಿಐ)– ಅಪರಾಧ ಎಸಗದಿದ್ದರೂ ಪಾಕಿಸ್ತಾನ ಮತ್ತು ಇರಾನ್ನ ಜೈಲುಗಳಲ್ಲಿ ಕಳೆದ ಒಂದು ವರ್ಷದಿಂದ ಬಂಧಿತರಾಗಿದ್ದ 19 ಮಂದಿ ಮೀನುಗಾರರು ಇಂದು ತಾಯ್ನಾಡಿಗೆ ವಾಪಸಾದರು. ಈ ಸಂದರ್ಭದಲ್ಲಿ ಅವರಿಗೆ ಹಾರ್ದಿಕ ಸ್ವಾಗತ ನೀಡಲಾಯಿತು.</p><p>ಕಳೆದ ವರ್ಷದ ಫೆಬ್ರುವರಿ 16ರಂದು ಮೀನು ಹಿಡಿಯುವ ಗುತ್ತಿಗೆ ಮೇಲೆ ಸೌದಿ ಅರೇಬಿಯಾಕ್ಕೆ ತೆರಳಿದ್ದ ಮೀನುಗಾರರು ಆಕಸ್ಮಿಕವಾಗಿ ಇರಾನ್ನ ಜಲಪ್ರದೇಶವನ್ನು ಪ್ರವೇಶಿಸಿದ್ದರಿಂದ ಇರಾನ್ನ ಅಧಿಕಾರಿಗಳು ಬಂಧಿಸಿದ್ದರು.</p><p>ವಿಚಾರಣೆ ಬಳಿಕ ಈ ಕೈದಿಗಳನ್ನು ಇರಾನ್ ಅಧಿಕಾರಿಗಳು ಪಾಕ್ಗೆ ಹಸ್ತಾಂತರಿಸಿ, ಭಾರತಕ್ಕೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಆದರೆ ಪಾಕಿಸ್ತಾನಿ ಅಧಿಕಾರಿಗಳು ಅವರನ್ನು ಕ್ವೆಟ್ಟಾದ ಜೈಲಿನಲ್ಲಿ ಹಲವು ತಿಂಗಳುಗಳ ಕಾಲ ಬಂಧನದಲ್ಲಿ ಇರಿಸಿದ್ದರು. ಬಳಿಕ ಅವರನ್ನು ಕರಾಚಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಏ. 23– ರಾಷ್ಟ್ರದಲ್ಲಿ, ವಿಶೇಷವಾಗಿ ಗುಜರಾತ್ ಮತ್ತು ರಾಜಸ್ಥಾನ ದಲ್ಲಿ ಭೀಕರ ಬರಗಾಲಕ್ಕೆ ತುತ್ತಾಗಿರುವ ಜನರ ನೆರವಿಗೆ ಧಾವಿಸುವಂತೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ರಾಷ್ಟ್ರದ ಜನತೆಗೆ ಕಳಕಳಿಯಿಂದ ಮನವಿ ಮಾಡಿಕೊಂಡಿದ್ದಾರೆ.</p><p>ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ‘ನಿಸರ್ಗ ವಿಕೋಪ ನಿಧಿ ಮತ್ತು ಇತರ ಯೋಜನೆಗಳಿಂದ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡುತ್ತಿದೆ. ಆದರೆ ಬರಗಾಲಕ್ಕೆ ತುತ್ತಾಗಿರುವ ಜನ ಮತ್ತು ಜಾನುವಾರುಗಳ ಸಂಖ್ಯೆಯನ್ನು ಗಮನಿಸಿದರೆ ಸರ್ಕಾರದ ಈ ಹಣ ಸಾಲುವುದಿಲ್ಲ. ಆಹಾರ, ಮೇವು, ಇತರ ಸೌಲಭ್ಯಗಳಿಗೆ ಅಪಾರ ಪ್ರಮಾಣದಲ್ಲಿ ಹಣ ಬೇಕಾಗುತ್ತದೆ ಎಂದು ತಿಳಿಸಿದರು.</p><p>‘ನೀವೆಲ್ಲ ಕೈಗೂಡಿಸಿದರೆ ಮಾತ್ರ ಸಂಕಷ್ಟದಲ್ಲಿರುವ ಜನರನ್ನು ಸಂರಕ್ಷಿಸಬಹುದು’ ಎಂದು ವಾಜಪೇಯಿ ಅವರು ತಿಳಿಸಿದರು.</p><p>ವರ್ಷದ ಬಳಿಕ ಮರಳಿದ 19 ಮೀನುಗಾರರು</p><p>ಚನ್ನೈ, ಏ. 23 (ಪಿಟಿಐ)– ಅಪರಾಧ ಎಸಗದಿದ್ದರೂ ಪಾಕಿಸ್ತಾನ ಮತ್ತು ಇರಾನ್ನ ಜೈಲುಗಳಲ್ಲಿ ಕಳೆದ ಒಂದು ವರ್ಷದಿಂದ ಬಂಧಿತರಾಗಿದ್ದ 19 ಮಂದಿ ಮೀನುಗಾರರು ಇಂದು ತಾಯ್ನಾಡಿಗೆ ವಾಪಸಾದರು. ಈ ಸಂದರ್ಭದಲ್ಲಿ ಅವರಿಗೆ ಹಾರ್ದಿಕ ಸ್ವಾಗತ ನೀಡಲಾಯಿತು.</p><p>ಕಳೆದ ವರ್ಷದ ಫೆಬ್ರುವರಿ 16ರಂದು ಮೀನು ಹಿಡಿಯುವ ಗುತ್ತಿಗೆ ಮೇಲೆ ಸೌದಿ ಅರೇಬಿಯಾಕ್ಕೆ ತೆರಳಿದ್ದ ಮೀನುಗಾರರು ಆಕಸ್ಮಿಕವಾಗಿ ಇರಾನ್ನ ಜಲಪ್ರದೇಶವನ್ನು ಪ್ರವೇಶಿಸಿದ್ದರಿಂದ ಇರಾನ್ನ ಅಧಿಕಾರಿಗಳು ಬಂಧಿಸಿದ್ದರು.</p><p>ವಿಚಾರಣೆ ಬಳಿಕ ಈ ಕೈದಿಗಳನ್ನು ಇರಾನ್ ಅಧಿಕಾರಿಗಳು ಪಾಕ್ಗೆ ಹಸ್ತಾಂತರಿಸಿ, ಭಾರತಕ್ಕೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಆದರೆ ಪಾಕಿಸ್ತಾನಿ ಅಧಿಕಾರಿಗಳು ಅವರನ್ನು ಕ್ವೆಟ್ಟಾದ ಜೈಲಿನಲ್ಲಿ ಹಲವು ತಿಂಗಳುಗಳ ಕಾಲ ಬಂಧನದಲ್ಲಿ ಇರಿಸಿದ್ದರು. ಬಳಿಕ ಅವರನ್ನು ಕರಾಚಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>