<p><strong>ಭೀಕರ ರೈಲು ಡಿಕ್ಕಿ 60ಕ್ಕೂ ಹೆಚ್ಚು ಸಾವು</strong></p>.<p><strong>ಸೇಲಂ, ಮೇ 15 (ಪಿಟಿಐ, ಯುಎನ್ಐ)– </strong>ಇಲ್ಲಿಂದ ಸುಮಾರು 30 ಕಿ.ಮೀ. ದೂರದ ಡ್ಯಾನಿಷ್ಪೇಟೆ ಮತ್ತು ಲೊಕ್ಕೂರು ಮಧ್ಯೆ ನಿನ್ನೆ ಮಧ್ಯರಾತ್ರಿ ಮದ್ರಾಸ್– ಕನ್ಯಾಕುಮಾರಿ ಎಕ್ಸ್ಪ್ರೆಸ್ ರೈಲು ಹಾಗೂ ಎದುರಿನಿಂದ ಬರುತ್ತಿದ್ದ ಇನ್ನೊಂದು ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿ ಕನಿಷ್ಠ 60ಕ್ಕೂ ಹೆಚ್ಚು ಪ್ರಯಾಣಿಕರು ಸತ್ತರು. ಈ ದುರ್ಘಟನೆಯಲ್ಲಿ ಇತರ 65ಕ್ಕೂ ಹೆಚ್ಚು ಮಂದಿ ಗಾಯಗೊಂಡರು.</p>.<p>ಈವರೆಗೆ ಒಟ್ಟು 55 ದೇಹಗಳನ್ನು ಹೊರತೆಗೆಯಲಾಗಿದೆ. ಇನ್ನಷ್ಟು ಜನ ಉರುಳಿಬಿದ್ದ ಬೋಗಿಗಳ ಮಧ್ಯೆ ಸಿಕ್ಕಿ<br />ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿಯಿದೆ. ಸತ್ತವರಲ್ಲಿ ಐವರು ಮಹಿಳೆಯರು ಹಾಗೂ ಮೂವರು ಮಕ್ಕಳು.</p>.<p><strong>ಭಾಷಾ ಅಕಾಡೆಮಿ ಸ್ಥಾಪನೆ ಇಲ್ಲ</strong></p>.<p><strong>ಬೆಂಗಳೂರು, ಮೇ 15– </strong>ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾದರಿಯಲ್ಲಿ ರಾಜ್ಯದಲ್ಲಿ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಂ.ಸಿ.ನಾಣಯ್ಯ ಇಂದು ಇಲ್ಲಿ ಸ್ಪಷ್ಟಪಡಿಸಿದರು.</p>.<p>ವಿವಿಧ ಅಕಾಡೆಮಿಗಳ ಬದಲಿಗೆ ಭಾಷಾ ಅಕಾಡೆಮಿಯೊಂದನ್ನು ಸ್ಥಾಪಿಸಿ ಆ ಮೂಲಕ ನಾಡಿನ ವಿಭಿನ್ನ ಭಾಷೆ– ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ಅಪೇಕ್ಷೆಯನ್ನು ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದುದನ್ನು ಇಲ್ಲಿ ಸ್ಮರಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೀಕರ ರೈಲು ಡಿಕ್ಕಿ 60ಕ್ಕೂ ಹೆಚ್ಚು ಸಾವು</strong></p>.<p><strong>ಸೇಲಂ, ಮೇ 15 (ಪಿಟಿಐ, ಯುಎನ್ಐ)– </strong>ಇಲ್ಲಿಂದ ಸುಮಾರು 30 ಕಿ.ಮೀ. ದೂರದ ಡ್ಯಾನಿಷ್ಪೇಟೆ ಮತ್ತು ಲೊಕ್ಕೂರು ಮಧ್ಯೆ ನಿನ್ನೆ ಮಧ್ಯರಾತ್ರಿ ಮದ್ರಾಸ್– ಕನ್ಯಾಕುಮಾರಿ ಎಕ್ಸ್ಪ್ರೆಸ್ ರೈಲು ಹಾಗೂ ಎದುರಿನಿಂದ ಬರುತ್ತಿದ್ದ ಇನ್ನೊಂದು ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿ ಕನಿಷ್ಠ 60ಕ್ಕೂ ಹೆಚ್ಚು ಪ್ರಯಾಣಿಕರು ಸತ್ತರು. ಈ ದುರ್ಘಟನೆಯಲ್ಲಿ ಇತರ 65ಕ್ಕೂ ಹೆಚ್ಚು ಮಂದಿ ಗಾಯಗೊಂಡರು.</p>.<p>ಈವರೆಗೆ ಒಟ್ಟು 55 ದೇಹಗಳನ್ನು ಹೊರತೆಗೆಯಲಾಗಿದೆ. ಇನ್ನಷ್ಟು ಜನ ಉರುಳಿಬಿದ್ದ ಬೋಗಿಗಳ ಮಧ್ಯೆ ಸಿಕ್ಕಿ<br />ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿಯಿದೆ. ಸತ್ತವರಲ್ಲಿ ಐವರು ಮಹಿಳೆಯರು ಹಾಗೂ ಮೂವರು ಮಕ್ಕಳು.</p>.<p><strong>ಭಾಷಾ ಅಕಾಡೆಮಿ ಸ್ಥಾಪನೆ ಇಲ್ಲ</strong></p>.<p><strong>ಬೆಂಗಳೂರು, ಮೇ 15– </strong>ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾದರಿಯಲ್ಲಿ ರಾಜ್ಯದಲ್ಲಿ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಂ.ಸಿ.ನಾಣಯ್ಯ ಇಂದು ಇಲ್ಲಿ ಸ್ಪಷ್ಟಪಡಿಸಿದರು.</p>.<p>ವಿವಿಧ ಅಕಾಡೆಮಿಗಳ ಬದಲಿಗೆ ಭಾಷಾ ಅಕಾಡೆಮಿಯೊಂದನ್ನು ಸ್ಥಾಪಿಸಿ ಆ ಮೂಲಕ ನಾಡಿನ ವಿಭಿನ್ನ ಭಾಷೆ– ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ಅಪೇಕ್ಷೆಯನ್ನು ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದುದನ್ನು ಇಲ್ಲಿ ಸ್ಮರಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>