<p><strong>ಅಶಿಸ್ತಿನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ನಾಯ್ಕರ್</strong></p>.<p>ಹುಬ್ಬಳ್ಳಿ, ಜುಲೈ 28– ಕಾಂಗೈ ಪಕ್ಷ ಶಿಸ್ತಿಗೆ ಹೆಸರಾಗಿದ್ದು, ಈ ಶಿಸ್ತನ್ನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ನೂತನವಾಗಿ ಆಯ್ಕೆಯಾಗಿರುವ ಪ್ರದೇಶ ಕಾಂಗೈ ಅಧ್ಯಕ್ಷ ಹಾಗೂ ಸಂಸತ್ ಸದಸ್ಯ<br />ಡಿ.ಕೆ.ನಾಯ್ಕರ್ ಅವರು ಇಂದು ಇಲ್ಲಿ ಎಚ್ಚರಿಕೆ ನೀಡಿದರು.</p>.<p>ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ಕಾರ್ಯಕರ್ತರು ಪಕ್ಷಕ್ಕೆ ನಿಷ್ಠರಾಗಿರುವುದು ಮುಖ್ಯ. ಪಕ್ಷವನ್ನು ಸಮರ್ಥವಾಗಿ ಹಾಗೂ ಬಲಿಷ್ಠವಾಗಿ ಬೆಳೆಸಬೇಕಿದ್ದರೆ<br />ತ್ಯಾಗ ಕೂಡ ಅಷ್ಟೇ ಮಹತ್ವದ್ದು. ಶತಮಾನದಷ್ಟು ಹಳೆಯದಾಗಿರುವ ಕಾಂಗೈ ಪಕ್ಷಕ್ಕೆ ಉನ್ನತ ಪರಂಪರೆ ಇದ್ದು, ಇಲ್ಲಿ ಶಿಸ್ತಿಗೆ ಮತ್ತು ಒಗ್ಗಟ್ಟಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರಲ್ಲದೆ,ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುವಂತೆ ಮಾಡಲು ತಾವು ಕೂಡ ಸಾಕಷ್ಟು ಶ್ರಮಿಸುವುದಾಗಿ ಘೋಷಿಸಿದರು.</p>.<p><strong>ಎಲ್ಟಿಟಿಇ ದಾಳಿ ವಿಫಲ– 200 ಉಗ್ರಗಾಮಿಗಳ ಸಾವು</strong></p>.<p>ಕೊಲಂಬೊ, ಜುಲೈ 28 (ಯುಎನ್ಐ)– ಈಶಾನ್ಯ ಶ್ರೀಲಂಕಾದ ವೇಲಿ ವೊಯಾ ಪ್ರದೇಶದಲ್ಲಿ ಇಂದು ಸೇನಾ ನೆಲೆಯೊಂದನ್ನು ಧ್ವಂಸಗೊಳಿಸುವ ತಮಿಳು ಉಗ್ರಗಾಮಿಗಳ ಯತ್ನವನ್ನು ರಕ್ಷಣಾ ಪಡೆಗಳು ವಿಫಲಗೊಳಿಸಿವೆ.</p>.<p>ಕದನದಲ್ಲಿ ಸುಮಾರು 200 ಉಗ್ರಗಾಮಿಗಳು ಹಾಗೂ ಇಬ್ಬರು ಯೋಧರು ಸತ್ತರು.</p>.<p>ಜಾಫ್ನಾದ ಆಗ್ನೇಯ ಭಾಗದ ವೆಟ್ಟಿಲೈಕರ್ನಿಯಲ್ಲಿ ಇನ್ನೂ ಎಂಟು ಮಂದಿ ಎಲ್ಟಿಟಿಇ ಉಗ್ರಗಾಮಿಗಳು ಸತ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಶಿಸ್ತಿನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ನಾಯ್ಕರ್</strong></p>.<p>ಹುಬ್ಬಳ್ಳಿ, ಜುಲೈ 28– ಕಾಂಗೈ ಪಕ್ಷ ಶಿಸ್ತಿಗೆ ಹೆಸರಾಗಿದ್ದು, ಈ ಶಿಸ್ತನ್ನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ನೂತನವಾಗಿ ಆಯ್ಕೆಯಾಗಿರುವ ಪ್ರದೇಶ ಕಾಂಗೈ ಅಧ್ಯಕ್ಷ ಹಾಗೂ ಸಂಸತ್ ಸದಸ್ಯ<br />ಡಿ.ಕೆ.ನಾಯ್ಕರ್ ಅವರು ಇಂದು ಇಲ್ಲಿ ಎಚ್ಚರಿಕೆ ನೀಡಿದರು.</p>.<p>ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ಕಾರ್ಯಕರ್ತರು ಪಕ್ಷಕ್ಕೆ ನಿಷ್ಠರಾಗಿರುವುದು ಮುಖ್ಯ. ಪಕ್ಷವನ್ನು ಸಮರ್ಥವಾಗಿ ಹಾಗೂ ಬಲಿಷ್ಠವಾಗಿ ಬೆಳೆಸಬೇಕಿದ್ದರೆ<br />ತ್ಯಾಗ ಕೂಡ ಅಷ್ಟೇ ಮಹತ್ವದ್ದು. ಶತಮಾನದಷ್ಟು ಹಳೆಯದಾಗಿರುವ ಕಾಂಗೈ ಪಕ್ಷಕ್ಕೆ ಉನ್ನತ ಪರಂಪರೆ ಇದ್ದು, ಇಲ್ಲಿ ಶಿಸ್ತಿಗೆ ಮತ್ತು ಒಗ್ಗಟ್ಟಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರಲ್ಲದೆ,ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುವಂತೆ ಮಾಡಲು ತಾವು ಕೂಡ ಸಾಕಷ್ಟು ಶ್ರಮಿಸುವುದಾಗಿ ಘೋಷಿಸಿದರು.</p>.<p><strong>ಎಲ್ಟಿಟಿಇ ದಾಳಿ ವಿಫಲ– 200 ಉಗ್ರಗಾಮಿಗಳ ಸಾವು</strong></p>.<p>ಕೊಲಂಬೊ, ಜುಲೈ 28 (ಯುಎನ್ಐ)– ಈಶಾನ್ಯ ಶ್ರೀಲಂಕಾದ ವೇಲಿ ವೊಯಾ ಪ್ರದೇಶದಲ್ಲಿ ಇಂದು ಸೇನಾ ನೆಲೆಯೊಂದನ್ನು ಧ್ವಂಸಗೊಳಿಸುವ ತಮಿಳು ಉಗ್ರಗಾಮಿಗಳ ಯತ್ನವನ್ನು ರಕ್ಷಣಾ ಪಡೆಗಳು ವಿಫಲಗೊಳಿಸಿವೆ.</p>.<p>ಕದನದಲ್ಲಿ ಸುಮಾರು 200 ಉಗ್ರಗಾಮಿಗಳು ಹಾಗೂ ಇಬ್ಬರು ಯೋಧರು ಸತ್ತರು.</p>.<p>ಜಾಫ್ನಾದ ಆಗ್ನೇಯ ಭಾಗದ ವೆಟ್ಟಿಲೈಕರ್ನಿಯಲ್ಲಿ ಇನ್ನೂ ಎಂಟು ಮಂದಿ ಎಲ್ಟಿಟಿಇ ಉಗ್ರಗಾಮಿಗಳು ಸತ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>