ಈ ಹಿನ್ನೆಲೆಯಲ್ಲಿ ಅದು ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿದ ಭೂಮಿತಿ ತಿದ್ದುಪಡಿ ವಿಧೇಯಕಗಳಿಗೆ ರಾಷ್ಟ್ರಪತಿಯವರ ಅಂಗೀಕಾರ ತಡೆಹಿಡಿದಿದೆ. ಆದರೆ, ಕರ್ನಾಟಕ ಸರ್ಕಾರವು ಭೂಮಿತಿ ಕಾಯ್ದೆಗೆ ತಿದ್ದುಪಡಿ ತಂದು ರಾಷ್ಟ್ರಪತಿಯವರ ಒಪ್ಪಿಗೆಗೆ ಕಳುಹಿಸದೆ ನೇರವಾಗಿ ರಾಜ್ಯಪಾಲರ ಒಪ್ಪಿಗೆ ಪಡೆದು ಜಾರಿಗೆ ತರುತ್ತಿದೆ ಎಂದು ಕೇಂದ್ರ ಗ್ರಾಮೀಣ ಪ್ರದೇಶ ಮತ್ತು ಉದ್ಯೋಗ ಸಚಿವ ಡಾ. ಜಗನ್ನಾಥ ಮಿಶ್ರಾ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಆಕ್ಷೇಪಿಸಿದರು.