<p><strong>ಭೂ ಕಾಯ್ದೆ ತಿದ್ದುಪಡಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್</strong></p>.<p><strong>ನವದೆಹಲಿ, ನ. 30</strong>– ಕರ್ನಾಟಕದ ವಿವಾದಾತ್ಮಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಮೀನು ಸಾಕಣೆಯನ್ನು ಕೃಷಿಯ ವ್ಯಾಪ್ತಿಗೆ ಒಳಪಡಿಸಿದ ಕಲಂನ ಕ್ರಮಬದ್ಧತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.</p>.<p>ಮೀನು ಸಾಕಣೆಯನ್ನು ಕೃಷಿ ಎಂದು ತಿದ್ದುಪಡಿ ಕಾಯ್ದೆಯಲ್ಲಿ ವ್ಯಾಖ್ಯಾನಿಸಲಾಗಿದೆ. ಇದು, ಜೀವಿ, ಬದುಕು ಮತ್ತು ಪರಿಸರ ಕುರಿತ ಸಂವಿಧಾನದ 14, 19 ಮತ್ತು 21ನೇ ಕಲಂಗಳ ಉಲ್ಲಂಘನೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಪ್ರೊ. ಎಂ.ಡಿ.ನಂಜುಂಡಸ್ವಾಮಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.</p>.<p><strong>ವಲಸೆ ನಿಯಂತ್ರಣಕ್ಕೆ ‘ಲಕ್ಷ್ಮಣ ರೇಖೆ’</strong></p>.<p><strong>ಬೆಂಗಳೂರು, ನ. 30–</strong> ಹೊರ ರಾಜ್ಯಗಳಿಂದ ಬೆಂಗಳೂರಿಗೆ ಧಾವಿಸುತ್ತಿರುವವರ ವಲಸೆಯನ್ನು ನಿಯಂತ್ರಿಸುವುದಕ್ಕಾಗಿ ‘ಲಕ್ಷ್ಮಣ ರೇಖೆ’ ಎಳೆಯಲು ತಾವು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರು ಇಂದು ಇಲ್ಲಿ ಪ್ರಕಟಿಸಿದರು.</p>.<p>ಬೆಂಗಳೂರಿನಲ್ಲಿ ಇರುವವರಿಗೆಲ್ಲರಿಗೂ ಮನೆ ಇಲ್ಲವೇ ನಿವೇಶನ ಸಿಗುವುದು ಖಚಿತ ಎಂಬ ಹಿನ್ನೆಲೆಯಲ್ಲಿ ಈ ನಗರಕ್ಕೆ ಬರುವವರ ಪ್ರಮಾಣ ಏಕಾಏಕಿಯಾಗಿ ಹೆಚ್ಚುವ ಅಪಾಯವಿದೆ. ಆದರೆ, ಈ ಆಸೆಯಿಂದ ಇಂದು, ನಾಳೆ ಬಂದವರಿಗೆಲ್ಲಾ ಇಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗದು. ಅದಕ್ಕೆ ಒಂದು ಮಿತಿಯನ್ನು ವಿಧಿಸಲೇಬೇಕಾಗಿದೆ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೂ ಕಾಯ್ದೆ ತಿದ್ದುಪಡಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್</strong></p>.<p><strong>ನವದೆಹಲಿ, ನ. 30</strong>– ಕರ್ನಾಟಕದ ವಿವಾದಾತ್ಮಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಮೀನು ಸಾಕಣೆಯನ್ನು ಕೃಷಿಯ ವ್ಯಾಪ್ತಿಗೆ ಒಳಪಡಿಸಿದ ಕಲಂನ ಕ್ರಮಬದ್ಧತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.</p>.<p>ಮೀನು ಸಾಕಣೆಯನ್ನು ಕೃಷಿ ಎಂದು ತಿದ್ದುಪಡಿ ಕಾಯ್ದೆಯಲ್ಲಿ ವ್ಯಾಖ್ಯಾನಿಸಲಾಗಿದೆ. ಇದು, ಜೀವಿ, ಬದುಕು ಮತ್ತು ಪರಿಸರ ಕುರಿತ ಸಂವಿಧಾನದ 14, 19 ಮತ್ತು 21ನೇ ಕಲಂಗಳ ಉಲ್ಲಂಘನೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಪ್ರೊ. ಎಂ.ಡಿ.ನಂಜುಂಡಸ್ವಾಮಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.</p>.<p><strong>ವಲಸೆ ನಿಯಂತ್ರಣಕ್ಕೆ ‘ಲಕ್ಷ್ಮಣ ರೇಖೆ’</strong></p>.<p><strong>ಬೆಂಗಳೂರು, ನ. 30–</strong> ಹೊರ ರಾಜ್ಯಗಳಿಂದ ಬೆಂಗಳೂರಿಗೆ ಧಾವಿಸುತ್ತಿರುವವರ ವಲಸೆಯನ್ನು ನಿಯಂತ್ರಿಸುವುದಕ್ಕಾಗಿ ‘ಲಕ್ಷ್ಮಣ ರೇಖೆ’ ಎಳೆಯಲು ತಾವು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರು ಇಂದು ಇಲ್ಲಿ ಪ್ರಕಟಿಸಿದರು.</p>.<p>ಬೆಂಗಳೂರಿನಲ್ಲಿ ಇರುವವರಿಗೆಲ್ಲರಿಗೂ ಮನೆ ಇಲ್ಲವೇ ನಿವೇಶನ ಸಿಗುವುದು ಖಚಿತ ಎಂಬ ಹಿನ್ನೆಲೆಯಲ್ಲಿ ಈ ನಗರಕ್ಕೆ ಬರುವವರ ಪ್ರಮಾಣ ಏಕಾಏಕಿಯಾಗಿ ಹೆಚ್ಚುವ ಅಪಾಯವಿದೆ. ಆದರೆ, ಈ ಆಸೆಯಿಂದ ಇಂದು, ನಾಳೆ ಬಂದವರಿಗೆಲ್ಲಾ ಇಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗದು. ಅದಕ್ಕೆ ಒಂದು ಮಿತಿಯನ್ನು ವಿಧಿಸಲೇಬೇಕಾಗಿದೆ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>