l ಮೇ ಅಂತ್ಯದೊಳಗೆ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ನಿರ್ಧಾರ
ಬೆಂಗಳೂರು, ಏ. 1– ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯನ್ನು ಮೇ 31ರ ಒಳಗೆ ಮುಗಿಸುವಂತೆ ರಾಜ್ಯ ಸಚಿವ ಸಂಪುಟ ಇಂದು ಇಲ್ಲಿ ತೀರ್ಮಾನ ಕೈಗೊಂಡಿತು.
ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಎಂ.ಸಿ. ನಾಣಯ್ಯ, ‘ಒಮ್ಮೆ ವರ್ಗಾವಣೆ ಮಾಡಿದ ನಂತರ ಅದನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ವಿಶೇಷ ಸಂದರ್ಭದಲ್ಲಿ ಅಂತಹ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಅವರಷ್ಟೇ ತೀರ್ಮಾನ ಕೈಗೊಳ್ಳುವರು’ ಎಂದು ಹೇಳಿದರು.