<p><strong>ಬೆಂಗಳೂರು. ಜೂನ್ 13–</strong> ಆಸ್ತಮಾದಿಂದ ನರಳುತ್ತಿದ್ದ ಚಿತ್ರನಟ ಸುಧೀರ್ (53) ಇಂದು ಇಲ್ಲಿ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. </p>.<p>ರಂಗ ಕಲಾವಿದರೂ ಆಗಿದ್ದ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರು. ಬಹುತೇಕ ಖಳ ನಾಯಕನ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ ಸುಧೀರ್ 150 ಚಿತ್ರಗಳಲ್ಲಿ ಅಭಿನಯಿಸಿದ್ದರು. </p>.<p>ಭಾಜಪ ರಾಜ್ಯ ಕಾರ್ಯಕಾರಿ ಮಂಡಲಿ ಸದಸ್ಯರೂ ಆಗಿದ್ದ ಸುಧೀರ್ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. </p>.<p><strong>ಕಂಬಾಲಪಲ್ಲಿ ಹತ್ಯೆ: 32 ಮಂದಿ ವಿರುದ್ಧ ದೋಷಾರೋಪ ಪಟ್ಟಿ</strong></p>.<p>ಬೆಂಗಳೂರು. ಜೂನ್ 13– ಚಿಂತಾಮಣಿ ತಾಲ್ಲೂಕು ಕಂಬಾಲಪಲ್ಲಿಯಲ್ಲಿ ಮಾರ್ಚ್ 11ರಂದು ನಡೆದ ದಲಿತರ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ಇ) 32 ಜನರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. </p>.<p>ಚಿಂತಾಮಣಿಯ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಈ ಪಟ್ಟಿ ಸಲ್ಲಿಸಿದ್ದು ರಾಜ್ಯ ಸರ್ಕಾರದ ಆದೇಶದಂತೆ ವಿಚಾರಣೆ ಕೈಗೆತ್ತಿಕೊಂಡ ಡಿಸಿಆರ್ಇ ವಿಚಾರಣೆಯನ್ನು ಪೂರ್ಣಗೊಳಿಸಿ ಒಟ್ಟು ನೂರು ಮಂದಿಯ ಸಾಕ್ಷ್ಯ ಸಂಗ್ರಹಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು. ಜೂನ್ 13–</strong> ಆಸ್ತಮಾದಿಂದ ನರಳುತ್ತಿದ್ದ ಚಿತ್ರನಟ ಸುಧೀರ್ (53) ಇಂದು ಇಲ್ಲಿ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. </p>.<p>ರಂಗ ಕಲಾವಿದರೂ ಆಗಿದ್ದ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರು. ಬಹುತೇಕ ಖಳ ನಾಯಕನ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ ಸುಧೀರ್ 150 ಚಿತ್ರಗಳಲ್ಲಿ ಅಭಿನಯಿಸಿದ್ದರು. </p>.<p>ಭಾಜಪ ರಾಜ್ಯ ಕಾರ್ಯಕಾರಿ ಮಂಡಲಿ ಸದಸ್ಯರೂ ಆಗಿದ್ದ ಸುಧೀರ್ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. </p>.<p><strong>ಕಂಬಾಲಪಲ್ಲಿ ಹತ್ಯೆ: 32 ಮಂದಿ ವಿರುದ್ಧ ದೋಷಾರೋಪ ಪಟ್ಟಿ</strong></p>.<p>ಬೆಂಗಳೂರು. ಜೂನ್ 13– ಚಿಂತಾಮಣಿ ತಾಲ್ಲೂಕು ಕಂಬಾಲಪಲ್ಲಿಯಲ್ಲಿ ಮಾರ್ಚ್ 11ರಂದು ನಡೆದ ದಲಿತರ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ಇ) 32 ಜನರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. </p>.<p>ಚಿಂತಾಮಣಿಯ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಈ ಪಟ್ಟಿ ಸಲ್ಲಿಸಿದ್ದು ರಾಜ್ಯ ಸರ್ಕಾರದ ಆದೇಶದಂತೆ ವಿಚಾರಣೆ ಕೈಗೆತ್ತಿಕೊಂಡ ಡಿಸಿಆರ್ಇ ವಿಚಾರಣೆಯನ್ನು ಪೂರ್ಣಗೊಳಿಸಿ ಒಟ್ಟು ನೂರು ಮಂದಿಯ ಸಾಕ್ಷ್ಯ ಸಂಗ್ರಹಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>