<p><strong>ಬೆಂಗಳೂರು, ನ. 4– ‘</strong>ಗಂಧದ ಗುಡಿ’, ‘ಎರಡು ಕನಸು’, ‘ಹೊಂಬಿಸಿಲು’ ಸೇರಿದಂತೆ ಸುಮಾರು 200 ಚಲನಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿ ರಸಿಕರ ನಾಲಿಗೆಯ ತುದಿಯಲ್ಲಿಯೇ ಇರುವಂಥ ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದ ಪ್ರಖ್ಯಾತ ಸಂಗೀತ ನಿರ್ದೇಶಕರಾದ ರಾಜನ್ ನಾಗೇಂದ್ರ ಜೋಡಿಯ ನಾಗೇಂದ್ರ ಇನ್ನಿಲ್ಲ.</p>.<p>ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಕಳೆದ ಸುಮಾರು ಒಂದೂವರೆ ತಿಂಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಅವರು, ಇಂದು ನಿಧನರಾದರು.</p>.<p><strong>ವಿಶ್ವಬ್ಯಾಂಕ್ನಿಂದ 10 ಸಾವಿರ ಕೋಟಿ ರೂಪಾಯಿ ಸಾಲ</strong></p>.<p>ತುಮಕೂರು, ನ. 4– ವಿವಿಧ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳಿಗೆ ವಿಶ್ವಬ್ಯಾಂಕ್ನಿಂದ ಸುಮಾರು 10 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ 7ರಂದು ವಿಶ್ವಬ್ಯಾಂಕ್ನ ಅಧ್ಯಕ್ಷರು ಬೆಂಗಳೂರಿಗೆ ಆಗಮಿಸಲಿದ್ದು, ಆಗ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ನ. 4– ‘</strong>ಗಂಧದ ಗುಡಿ’, ‘ಎರಡು ಕನಸು’, ‘ಹೊಂಬಿಸಿಲು’ ಸೇರಿದಂತೆ ಸುಮಾರು 200 ಚಲನಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿ ರಸಿಕರ ನಾಲಿಗೆಯ ತುದಿಯಲ್ಲಿಯೇ ಇರುವಂಥ ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದ ಪ್ರಖ್ಯಾತ ಸಂಗೀತ ನಿರ್ದೇಶಕರಾದ ರಾಜನ್ ನಾಗೇಂದ್ರ ಜೋಡಿಯ ನಾಗೇಂದ್ರ ಇನ್ನಿಲ್ಲ.</p>.<p>ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಕಳೆದ ಸುಮಾರು ಒಂದೂವರೆ ತಿಂಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಅವರು, ಇಂದು ನಿಧನರಾದರು.</p>.<p><strong>ವಿಶ್ವಬ್ಯಾಂಕ್ನಿಂದ 10 ಸಾವಿರ ಕೋಟಿ ರೂಪಾಯಿ ಸಾಲ</strong></p>.<p>ತುಮಕೂರು, ನ. 4– ವಿವಿಧ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳಿಗೆ ವಿಶ್ವಬ್ಯಾಂಕ್ನಿಂದ ಸುಮಾರು 10 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ 7ರಂದು ವಿಶ್ವಬ್ಯಾಂಕ್ನ ಅಧ್ಯಕ್ಷರು ಬೆಂಗಳೂರಿಗೆ ಆಗಮಿಸಲಿದ್ದು, ಆಗ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>