<p><strong>ವಾಸುದೇವನ್ ನಾಯರ್ಗೆ ಜ್ಞಾನಪೀಠ ಪ್ರಶಸ್ತಿ</strong></p>.<p>ನವದೆಹಲಿ, ಜ. 19 (ಪಿಟಿಐ)– ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಮಲಯಾಳಂ ಭಾಷೆಯ ಖ್ಯಾತ ಸಾಹಿತಿ ಮತ್ತು ಮಾತೃಭೂಮಿ ಪ್ರಕಾಶನ ಸಮೂಹದ ಸಂಪಾದಕ ಎಂ.ಟಿ.ವಾಸುದೇವನ್ ನಾಯರ್ ಅವರನ್ನು 1995ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಇದು 21ನೇ ಜ್ಞಾನಪೀಠ ಪ್ರಶಸ್ತಿಯಾಗಿದ್ದು, ಪ್ರಶಸ್ತಿ 2.5 ಲಕ್ಷ ರೂ. ಮತ್ತು ವಾಗ್ದೇವಿ ಪ್ರತಿಮೆ ಹೊಂದಿದೆ. ನಾಯರ್ ಅವರ 1975–94ರ ನಡುವಿನ ಸೃಜನಶೀಲ ಸಾಹಿತ್ಯ ಬರವಣಿಗೆಯನ್ನು ಗಣನೆಗೆ ತೆಗೆದುಕೊಂಡು ಈ ಪ್ರಶಸ್ತಿ ನೀಡಲಾಗಿದೆ ಎಂದು ‘ಭಾರತೀಯ ಜ್ಞಾನಪೀಠ’ ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<p><strong>ಮೈಸೂರು ಬ್ಯಾಂಕ್ ಪ್ರತ್ಯೇಕಕ್ಕೆ ಸಲಹೆ</strong></p>.<p>ಬೆಂಗಳೂರು, ಜ. 19– ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸೇರಿದಂತೆ ಎಲ್ಲ ಅಧೀನ ಬ್ಯಾಂಕುಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್ನಿಂದ ಪ್ರತ್ಯೇಕಿಸಬೇಕು ಮತ್ತು ಅವುಗಳಿಗೆ ಪ್ರತ್ಯೇಕ ಅಧ್ಯಕ್ಷರನ್ನು ನೇಮಿಸಬೇಕು ಎಂದು ಲೋಕಸಭೆಯ ಅಧೀನ ಶಾಸನಗಳ ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.</p>.<p>ಕೇಂದ್ರ ರೇಷ್ಮೆ ಮಂಡಳಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸಿಂಡಿಕೇಟ್ ಬ್ಯಾಂಕ್ಗಳ ಕಾರ್ಯವಿಧಾನ ಮತ್ತು ಅವು<br />ಎದುರಿಸುತ್ತಿರುವ ಸಮಸ್ಯೆಗಳಅಧ್ಯಯನ ನಡೆಸಲು ಸಂಸತ್ ಸದಸ್ಯ ಅಮಲ್ ದತ್ತ ಅವರ ನೇತೃತ್ವದಲ್ಲಿ ಸಮಿತಿಯು ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಸುದೇವನ್ ನಾಯರ್ಗೆ ಜ್ಞಾನಪೀಠ ಪ್ರಶಸ್ತಿ</strong></p>.<p>ನವದೆಹಲಿ, ಜ. 19 (ಪಿಟಿಐ)– ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಮಲಯಾಳಂ ಭಾಷೆಯ ಖ್ಯಾತ ಸಾಹಿತಿ ಮತ್ತು ಮಾತೃಭೂಮಿ ಪ್ರಕಾಶನ ಸಮೂಹದ ಸಂಪಾದಕ ಎಂ.ಟಿ.ವಾಸುದೇವನ್ ನಾಯರ್ ಅವರನ್ನು 1995ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಇದು 21ನೇ ಜ್ಞಾನಪೀಠ ಪ್ರಶಸ್ತಿಯಾಗಿದ್ದು, ಪ್ರಶಸ್ತಿ 2.5 ಲಕ್ಷ ರೂ. ಮತ್ತು ವಾಗ್ದೇವಿ ಪ್ರತಿಮೆ ಹೊಂದಿದೆ. ನಾಯರ್ ಅವರ 1975–94ರ ನಡುವಿನ ಸೃಜನಶೀಲ ಸಾಹಿತ್ಯ ಬರವಣಿಗೆಯನ್ನು ಗಣನೆಗೆ ತೆಗೆದುಕೊಂಡು ಈ ಪ್ರಶಸ್ತಿ ನೀಡಲಾಗಿದೆ ಎಂದು ‘ಭಾರತೀಯ ಜ್ಞಾನಪೀಠ’ ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<p><strong>ಮೈಸೂರು ಬ್ಯಾಂಕ್ ಪ್ರತ್ಯೇಕಕ್ಕೆ ಸಲಹೆ</strong></p>.<p>ಬೆಂಗಳೂರು, ಜ. 19– ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸೇರಿದಂತೆ ಎಲ್ಲ ಅಧೀನ ಬ್ಯಾಂಕುಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್ನಿಂದ ಪ್ರತ್ಯೇಕಿಸಬೇಕು ಮತ್ತು ಅವುಗಳಿಗೆ ಪ್ರತ್ಯೇಕ ಅಧ್ಯಕ್ಷರನ್ನು ನೇಮಿಸಬೇಕು ಎಂದು ಲೋಕಸಭೆಯ ಅಧೀನ ಶಾಸನಗಳ ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.</p>.<p>ಕೇಂದ್ರ ರೇಷ್ಮೆ ಮಂಡಳಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸಿಂಡಿಕೇಟ್ ಬ್ಯಾಂಕ್ಗಳ ಕಾರ್ಯವಿಧಾನ ಮತ್ತು ಅವು<br />ಎದುರಿಸುತ್ತಿರುವ ಸಮಸ್ಯೆಗಳಅಧ್ಯಯನ ನಡೆಸಲು ಸಂಸತ್ ಸದಸ್ಯ ಅಮಲ್ ದತ್ತ ಅವರ ನೇತೃತ್ವದಲ್ಲಿ ಸಮಿತಿಯು ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>