<p><strong>11 ರಾಜಕಾರಣಿಗಳ ಬಂಧನಕ್ಕೆ ವಾರಂಟ್</strong></p>.<p><strong>ನವದೆಹಲಿ, ಫೆ. 29 (ಯುಎನ್ಐ, ಪಿಟಿಐ)–</strong> ಹವಾಲ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಪ್ರಭಾವಿ ರಾಜಕಾರಣಿಗಳನ್ನು ಬಂಧಿಸಲು ಸಿಬಿಐ ಯಾವುದೇ ಕ್ರಮ ಕೈಗೊಳ್ಳದಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಶೇಷ ಹವಾಲ ನ್ಯಾಯಾಲಯ, ಇಂದು 11 ರಾಜಕಾರಣಿಗಳ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಈ ನಡುವೆ, ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎಲ್.ಕೆ.ಅಡ್ವಾಣಿ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.</p>.<p>ಪ್ರಭಾವಿ ರಾಜಕಾರಣಿಗಳ ಬಂಧನಕ್ಕೆ ಸಂಬಂಧಿಸಿದಂತೆ ಬೇರೆ ಮಾನದಂಡ ನೀಡಬೇಕೆಂಬ ಸಿಬಿಐ ಮನವಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಕಾನೂನು ಎಲ್ಲರಿಗೂ ಒಂದೇ ಎಂದು ಸ್ಪಷ್ಟಪಡಿಸಿದೆ.</p>.<p><strong>ಜೂನ್ 1ರಿಂದ ರಾಜ್ಯದಾದ್ಯಂತ ಸಾರಾಯಿ ನಿಷೇಧ</strong></p>.<p><strong>ಬೆಂಗಳೂರು, ಫೆ. 29– </strong>ಸಂಪೂರ್ಣ ಪಾನ ನಿಷೇಧವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಈ ವರ್ಷದ ಜೂನ್ 1ರಿಂದ ರಾಜ್ಯದಲ್ಲಿ ಸಾರಾಯಿ ಮಾರಾಟವನ್ನು ಸರ್ಕಾರ ನಿಷೇಧಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡರು ಇಂದು ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>11 ರಾಜಕಾರಣಿಗಳ ಬಂಧನಕ್ಕೆ ವಾರಂಟ್</strong></p>.<p><strong>ನವದೆಹಲಿ, ಫೆ. 29 (ಯುಎನ್ಐ, ಪಿಟಿಐ)–</strong> ಹವಾಲ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಪ್ರಭಾವಿ ರಾಜಕಾರಣಿಗಳನ್ನು ಬಂಧಿಸಲು ಸಿಬಿಐ ಯಾವುದೇ ಕ್ರಮ ಕೈಗೊಳ್ಳದಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಶೇಷ ಹವಾಲ ನ್ಯಾಯಾಲಯ, ಇಂದು 11 ರಾಜಕಾರಣಿಗಳ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಈ ನಡುವೆ, ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎಲ್.ಕೆ.ಅಡ್ವಾಣಿ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.</p>.<p>ಪ್ರಭಾವಿ ರಾಜಕಾರಣಿಗಳ ಬಂಧನಕ್ಕೆ ಸಂಬಂಧಿಸಿದಂತೆ ಬೇರೆ ಮಾನದಂಡ ನೀಡಬೇಕೆಂಬ ಸಿಬಿಐ ಮನವಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಕಾನೂನು ಎಲ್ಲರಿಗೂ ಒಂದೇ ಎಂದು ಸ್ಪಷ್ಟಪಡಿಸಿದೆ.</p>.<p><strong>ಜೂನ್ 1ರಿಂದ ರಾಜ್ಯದಾದ್ಯಂತ ಸಾರಾಯಿ ನಿಷೇಧ</strong></p>.<p><strong>ಬೆಂಗಳೂರು, ಫೆ. 29– </strong>ಸಂಪೂರ್ಣ ಪಾನ ನಿಷೇಧವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಈ ವರ್ಷದ ಜೂನ್ 1ರಿಂದ ರಾಜ್ಯದಲ್ಲಿ ಸಾರಾಯಿ ಮಾರಾಟವನ್ನು ಸರ್ಕಾರ ನಿಷೇಧಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡರು ಇಂದು ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>