ಬೆಂಗಳೂರು, ನ. 16– ವಿಶ್ವಸುಂದರಿ ಸ್ಪರ್ಧೆಯನ್ನು ಬಲವಾಗಿ ವಿರೋಧಿಸುತ್ತಿರುವ ಸಂಘಟನೆಗಳಲ್ಲಿ ಬಿಜೆಪಿಯ ಮುಂಚೂಣಿ ಘಟಕಗಳಲ್ಲಿ ಒಂದಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಹ ಒಂದು. ಆದರೆ, ಎಬಿವಿಪಿಯ ಸಕ್ರಿಯ ಸದಸ್ಯರೂ ಅಗಿರುವ ಖ್ಯಾತ ಚಿತ್ರ ನಿರ್ದೇಶಕ ಪ್ರಿಯದರ್ಶನ್ ಅವರೇ ವಿಶ್ವಸುಂದರಿ ಸ್ಪರ್ಧೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರ್ದೇಶನದ ಹೊಣೆ ಹೊತ್ತಿರುವುದು ಹಲವರಿಗೆ ಹುಬ್ಬೇರಿಸುವಂತೆ ಮಾಡಿದೆ.