ಷರೀಫ್ ರಾಜೀನಾಮೆ: ಪಕ್ಷದಲ್ಲಿ ಅತೃಪ್ತಿಯ ಹೊಗೆ
ನವದೆಹಲಿ, ನ. 23– ಬಾಬ್ರಿ ಮಸೀದಿಯನ್ನು ರಕ್ಷಿಸಲಿಲ್ಲ ಎನ್ನುವ ಕಾರಣಕ್ಕೆ ಈಗಾಗಲೇ ಕಾಂಗ್ರೆಸ್ಸಿನಿಂದ ದೂರ ಸರಿದಿರುವ ಮುಸ್ಲಿಮರ ವಿಶ್ವಾಸ ಗಳಿಸುವ ಬದಲು ಸಿ.ಕೆ.ಜಾಫರ್ ಷರೀಫ್ ಅವರಿಗಿದ್ದ ರೈಲ್ವೆ ಖಾತೆಯನ್ನು ಕಿತ್ತುಕೊಂಡು ಕೊನೆಗೆ ಅವರೇ ರಾಜೀನಾಮೆ ನೀಡುವಂತೆ ಮಾಡಿದರೆನ್ನಲಾದ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕ್ರಮಕ್ಕೆ ಇಲ್ಲಿ ಪಕ್ಷದಲ್ಲಿಯೇ ದಟ್ಟವಾದ ಅಸಮಾಧಾನ ಕಂಡು ಬರುತ್ತಿದೆಯಾದರೂ ಅದನ್ನು ಬಹಿರಂಗಗೊಳಿಸಲು ಹಿಂಜರಿಯುತ್ತಿದ್ದಾರೆ.