ಬೆಂಗಳೂರು, ಡಿ. 3– ಅಂಬೇಡ್ಕರ್ ಪ್ರತಿಮೆಗೆ ‘ಮದ್ಯಾಭಿಷೇಕ’ ಪ್ರಕರಣದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಆಗ್ರಹಿಸಿ ದಲಿತ ಸಂಘಟನೆಗಳು ರಾಜ್ಯದಾದ್ಯಂತ ನಡೆಸುತ್ತಿರುವ ಚಳವಳಿಯ ಒತ್ತಡಕ್ಕೆ ಮಣಿದು, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಇಂದು ತಮ್ಮ ಸ್ಥಾನಕ್ಕೆ ಸ್ವಯಿಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ.