ರಾವ್ ಅವರ ಭದ್ರತೆಗೆ ಗಂಭೀರ ಅಪಾಯವಿದೆ ಎಂಬ ಕಾರಣವೊಡ್ಡಿ ಇಂದು ಮುಂಜಾನೆ ದೆಹಲಿ ಪೊಲೀಸ್ ಕಮಿಷನರ್ ನಿಖಿಲ್ ಕುಮಾರ್ ಅವರು ವಿಚಾರಣೆಯ ಸ್ಥಳವನ್ನು ತೀಸ್ ಹಜಾರಿ ಕೋರ್ಟಿನಿಂದ ಇನ್ನೊಂದು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸ
ಬೇಕೆಂದು ಕೋರಿ ಸಲ್ಲಿಸಿದ್ದ ವಿಶೇಷ ಮನವಿಯನ್ನು ಪರಿಶೀಲಿಸಿದ ವಿಭಾಗೀಯ ಪೀಠ, ಮುಂದಿನ ಆದೇಶ ನೀಡುವವರೆಗೆ ಈ ವಿನಾಯಿತಿ ನೀಡಿತು. ಈ ವಿಶೇಷ ಮನವಿಯ ವಿಚಾರಣೆಯನ್ನು ಅ.7ಕ್ಕೆ ಕೋರ್ಟ್ ಮುಂದೂಡಿತು.