ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ| ಮಂಗಳವಾರ, 1ನೇ ಅಕ್ಟೋಬರ್‌ 1996

Last Updated 30 ಸೆಪ್ಟೆಂಬರ್ 2021, 18:15 IST
ಅಕ್ಷರ ಗಾತ್ರ

ವಂಚನೆ ಹಗರಣ: ರಾವ್‌ ಖುದ್ದು ಹಾಜರಿಗೆ ಕೋರ್ಟ್‌ ವಿನಾಯಿತಿ

ನವದೆಹಲಿ, ಸೆ. 30(ಪಿಟಿಐ)– ಲಕ್ಕೂಭಾಯ್‌ ಪಾಠಕ್‌ ವಂಚನೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್‌ ಅವರು ಖುದ್ದಾಗಿ ಸಿಬಿಐ ನ್ಯಾಯಾಧೀಶರ ಎದುರು ಹಾಜರಾಗುವುದಕ್ಕೆ ಇಂದು ಸುಪ್ರೀಂ ಕೋರ್ಟ್‌ ವಿನಾಯಿತಿ ನೀಡಿತು.

ರಾವ್‌ ಅವರ ಭದ್ರತೆಗೆ ಗಂಭೀರ ಅಪಾಯವಿದೆ ಎಂಬ ಕಾರಣವೊಡ್ಡಿ ಇಂದು ಮುಂಜಾನೆ ದೆಹಲಿ ಪೊಲೀಸ್‌ ಕಮಿಷನರ್‌ ನಿಖಿಲ್‌ ಕುಮಾರ್‌ ಅವರು ವಿಚಾರಣೆಯ ಸ್ಥಳವನ್ನು ತೀಸ್‌ ಹಜಾರಿ ಕೋರ್ಟಿನಿಂದ ಇನ್ನೊಂದು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸ
ಬೇಕೆಂದು ಕೋರಿ ಸಲ್ಲಿಸಿದ್ದ ವಿಶೇಷ ಮನವಿಯನ್ನು ಪರಿಶೀಲಿಸಿದ ವಿಭಾಗೀಯ ಪೀಠ, ಮುಂದಿನ ಆದೇಶ ನೀಡುವವರೆಗೆ ಈ ವಿನಾಯಿತಿ ನೀಡಿತು. ಈ ವಿಶೇಷ ಮನವಿಯ ವಿಚಾರಣೆಯನ್ನು ಅ.7ಕ್ಕೆ ಕೋರ್ಟ್‌ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT