ನವದೆಹಲಿ, ಏ. 10– ಕಾಂಗ್ರೆಸ್ ಮತ್ತು ಸಂಯುಕ್ತ ರಂಗದ ನಡುವೆ ಉದ್ಭವಿಸಿರುವ ಬಿಕ್ಕಟ್ಟಿನ ಪರಿಹಾರಕ್ಕೆ ಇಂದು ನಡೆದ ಎರಡನೇ ಸುತ್ತಿನ ಮಾತುಕತೆಯೂ ವಿಫಲವಾಯಿತು. ಉಭಯ ಬಣಗಳು ತಮ್ಮ ನಿಲುವಿಗೆ ಬದ್ಧವಾಗಿದ್ದರಿಂದ ಬಿಕ್ಕಟ್ಟು ಬಗೆಹರಿಯಲಿಲ್ಲ. ಇದರಿಂದಾಗಿ ನಾಳೆ ಸೇರಲಿರುವ ಸಂಸತ್ ವೇದಿಕೆಯೇ ಸರ್ಕಾರದ ಹಣೆಬರಹವನ್ನು ನಿರ್ಧರಿಸಲಿದೆ.